ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ಭವಿಷ್ಯವನ್ನು ನುಡಿದಿದ್ದಾರೆ. ಇಂದು ಗಂಗಾವತಿಯಲ್ಲಿ ಮಾತನಾಡಿದ ಶಾಸಕರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನ ಬಿಡದಿದ್ರೆ ಡಿಕೆ ಶಿವಕುಮಾರ್ ಕಿತ್ತುಕೊಳ್ಳತ್ತಾರೆ ಎಂದು ಹೇಳಿದರು.
25
ಸಚಿವರ ಡಿನ್ನರ್ ಪಾರ್ಟಿಯಿಂದ ಗುಂಪುಗಾರಿಕೆ ನಡೆದಿದೆ ಎಂಬುವುದು ಗೊತ್ತಾಗುತ್ತಿದೆ. ಸಚಿವರ ಗುಂಪುಗಾರಿಕೆಯಿಂದ ಈಗಾಗಲೇ ಸಿದ್ದರಾಮಯ್ಯ ಸ್ಥಾನ ಅಲುಗಾಡುತ್ತಿದೆ. ಸಚಿವರು ಡಿನ್ನರ್ ಪಾರ್ಟಿಗೆ ಮುಂದಾದ್ರೆ ಅದನ್ನು ಸಿಎಂ ಡೈವರ್ಟ್ ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಹೇಳಿಕೆ ನೀಡಿದರು. ಕೆಲವೇ ತಿಂಗಳಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಜನಾರ್ದನ ರೆಡ್ಡಿ ಭವಿಷ್ಯ ನುಡಿದರು.
35
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅಹಿಂದ ಶಾಸಕರು ಮತ್ತು ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದರು. ಆದ್ರೆ ಹೈಕಮಾಂಡ್ ಸೂಚನೆ ಮೇರೆ ಡಿನ್ನರ್ ಪಾರ್ಟಿಯನ್ನು ಪರಮೇಶ್ವರ್ ರದ್ದುಗೊಳಿಸಿದರು ಎಂದು ತಿಳಿದು ಬಂದಿದೆ.
45
ಮತ್ತೊಂದೆಡೆ ವಿದೇಶ ಪ್ರವಾಸದಿಂದ ನೇರವಾಗಿ ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜ್ಯ ಮತ್ತು ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನವನ್ನು ಗಮನಕ್ಕೆ ತಂದಿದ್ದಾರೆ. ಈ ವೇಳೆ ನಾವೇ ರಾಜ್ಯಕ್ಕೆ ಬಂದು ಎಲ್ಲಾ ಗೊಂದಲಗಳನ್ನ ಬಗೆಹರಿಸುತ್ತೇವೆ ಎಂದು ಹೈಕಮಾಂಡ್ ಭರಸವೆ ನೀಡಿದೆ ಎನ್ನಲಾಗಿದೆ.
55
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣ್ದೀಪ್ ಸುರ್ಜೇವಾಲಾ ಅವರ ಸೂಚನೆ ಮೇಲೆ ಅಹಿಂದ ನಾಯಕರ ಡಿನ್ನರ್ ಪಾರ್ಟಿ ರದ್ದಾಗಿದೆ ಎನ್ನಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸುರ್ಜವಾಲಾ ರಾಜ್ಯಕ್ಕೆ ಆಗಮಿಸಿ ಅಹಿಂದ ನಾಯಕರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದೆಡೆ ಅಹಿಂದ ನಾಯಕರೆಲ್ಲರೂ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿಯಾಗುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.