ದೆಹಲಿಯಲ್ಲಿ ಸಿದ್ದರಾಮಯ್ಯ ಸಭೆ: ಕೆಪಿಸಿಸಿಗೆ ನೂತನ ಸಾರಥಿ ಯಾರು?

First Published Jan 14, 2020, 2:56 PM IST

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವಿನ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್‌ ಹಾಗೂ ಎಂಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಹುತೇಕ ಡಿಕೆಶಿಗೆ ಕೆಪಿಸಿಸಿ ಪಟ್ಟ ಕಟ್ಟಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಸಿದ್ದರಾಮಯ್ಯ ತಮ್ಮ ಆಪ್ತ ನಾಯಕನಿಗೆ ಪಟ್ಟ ಕಟ್ಟಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆಗಾದ್ರೆ ದೆಹಲಯಲ್ಲಿ ಕೈ ಡ್ರಾಮಾ ಹೇಗಿದೆ? ನೋಡಿ..

ಹೈಕಮಾಂಡ್‌ಗೆ ಕಗ್ಗಂಟಾಗಿರುವ ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸಂಬಂಧ ಸೋನಿಯಾ ಗಾಂಧಿ ಭೇಟಿಗೂ ಮುನ್ನ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಸಿದ್ದರಾಮಯ್ಯನವರು.
undefined
ಹೈಕಮಾಂಡ್‍ನ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು ಕರ್ನಾಟಕ ನಾಯಕ ಸಭೆ ಬಳಿಕ ಅಹಮ್ಮದ್ ಪಟೇಲ್ ಜತೆ ಕೆಪಿಸಿಸಿ ಅಧ್ಯಕ್ಷ ಬಗ್ಗೆ ಸಮಾಲೋಚನೆ ನಡೆಸಿದರು.
undefined
ಮಂಳವಾರ ಬೆಳಗ್ಗೆ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಟಿಫಿನ್ ಸೇವಿಸಿದರು.
undefined
ಸೋಮವಾರ ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ ಬಳಿಕ ಕರ್ನಾಟಕದಲ್ಲಿ ಭವನಕ್ಕೆ ಸಿದ್ದರಾಮಯ್ಯ ಪ್ರವೇಶ
undefined
ದೆಹಲಿಯಲ್ಲಿ ಸಿದ್ದರಾಮಯ್ಯಗೆ ಸಾಥ್ ಕೊಟ್ಟ ಹಿರಿಯ ಕಾಂಗ್ರೆಸ್ ನಾಯಕ ಕೆ.ರಾಜಣ್ಣ
undefined
ಹೈಕಮಾಂಡ್‍ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
undefined
ಸೋಮವಾರ ಸಂಜೆ ದೆಹಲಿಗೆ ಹೋಗುವ ಮುನ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ಆರ್.ವಿ.ದೇಶಪಾಂಡೆ ಮಾತುಕತೆ ನಡೆಸಿರುವುದು.
undefined
ಸೋಮವಾರ ಸಂಜೆ ಸಿದ್ದರಾಮಯ್ಯನವರ ಜತೆಗೆ ದೆಹಲಿಗೆ ತೆರಳಿದ ಶಾಸಕ ಜಮೀರ್ ಅಹ್ಮದ್ ಖಾನ್
undefined
ಹೈಕಮಾಂಡ್‍ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
undefined
click me!