ದೇವೇಗೌಡ್ರ ಮಾನಸ ಪುತ್ರ ಈಸ್ ಬ್ಯಾಕ್: ದತ್ತಾ ಸರ್ಪ್ರೈಸ್ ಎಂಟ್ರಿಯಿಂದ ಊಹಾಪೋಹಗಳಿಗೆ ತೆರೆ

First Published Feb 14, 2020, 7:10 PM IST

2018ರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಸದ್ದಿಲ್ಲದೆ ತೆರೆಮರೆಗೆ ಸರಿದಿದ್ದ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ದಿಢೀರ್ ಸುದ್ದಿಯಾಗಿದ್ದಾರೆ. ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ದೇವೇಗೌಡ್ರು ಮಾನಸ ಪುತ್ರ ಎಂದೇ ಬಿಂಬಿತರಾಗಿದ್ದ ದತ್ತಾ ಅವರು ಕಳೆದ ವಿಧಾನಸಭೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು.ಬಳಿಕ ಲೋಕಸಭೆ ಚುನಾವಣೆಯಲ್ಲಿ ನಾಮಕಾವಸ್ತೆ ಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಂತರ ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಅಷ್ಟೇ ಅಲ್ಲದೇ ದತ್ತಾ ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಆದ್ರೆ, ಇದೀಗ ದತ್ತಾ ಅವರು ಸಪ್ರೈಸ್ ಕೊಟ್ಟಿದ್ದಾರೆ.

ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ ವೈ ಎಸ್ ವಿ ದತ್ತಾ ಅವರು ಮತ್ತೆ ಫೀಲ್ಡ್ ಗೆ ಮರಳಿದ್ದು, ಪಕ್ಷದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ.
undefined
2018ರ ಕಡೂರು ವಿಧಾನಸಭೆ ಕ್ಷೇತ್ರದಿಂದ ಸೋತ ಬಳಿಕ ಅವರು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದರು. ಅಷ್ಟೇ ಅಲ್ಲದೇ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದವು.
undefined
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಸಾಮಾಜಿಕ ಜಾಲತಾಣದ ಕಾರ್ಯಕರ್ತರ ಸಭೆಯಲ್ಲಿ ದತ್ತಾ ಕಾಣಿಸಿಕೊಂಡರು.
undefined
2019ರ ಲೋಕಸಭೆ ಚುನಾವಣೆಯಲ್ಲಿ ನಾಮಕಾವಸ್ತೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಂತರ ಅಲ್ಲಿಂದ ಅವರು ನಾಪತ್ತೆಯಾಗಿದ್ದರು.
undefined
ಕೆಲವು ದಿನಗಳಿಂದ ಜೆಡಿಎಸ್ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
undefined
ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲೂ ಸಹ ದತ್ತಣ್ಣ ಕಾಣಿಸಿಕೊಂಡಿದ್ದರು.
undefined
ದತ್ತಾ ಅವರು ಪಂಚೆ ಮೇಲೆ ಆಟೋದಲ್ಲಿ ಸುತ್ತಾಡುತ್ತಾ ಸರಳ ಸ್ವಭಾವದ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.
undefined
ಕಡೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರು ಪತ್ನಿ ಆರ್.ನಿರ್ಮಲಾ (60) ಅವರು ವಿಧಿವಶರಾಗಿದ್ದಾರೆ.
undefined
click me!