ದೇವೇಗೌಡ್ರ ಮಾನಸ ಪುತ್ರ ಈಸ್ ಬ್ಯಾಕ್: ದತ್ತಾ ಸರ್ಪ್ರೈಸ್ ಎಂಟ್ರಿಯಿಂದ ಊಹಾಪೋಹಗಳಿಗೆ ತೆರೆ
First Published Feb 14, 2020, 7:10 PM IST2018ರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಸದ್ದಿಲ್ಲದೆ ತೆರೆಮರೆಗೆ ಸರಿದಿದ್ದ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ದಿಢೀರ್ ಸುದ್ದಿಯಾಗಿದ್ದಾರೆ. ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ದೇವೇಗೌಡ್ರು ಮಾನಸ ಪುತ್ರ ಎಂದೇ ಬಿಂಬಿತರಾಗಿದ್ದ ದತ್ತಾ ಅವರು ಕಳೆದ ವಿಧಾನಸಭೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು.ಬಳಿಕ ಲೋಕಸಭೆ ಚುನಾವಣೆಯಲ್ಲಿ ನಾಮಕಾವಸ್ತೆ ಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಂತರ ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಅಷ್ಟೇ ಅಲ್ಲದೇ ದತ್ತಾ ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಆದ್ರೆ, ಇದೀಗ ದತ್ತಾ ಅವರು ಸಪ್ರೈಸ್ ಕೊಟ್ಟಿದ್ದಾರೆ.