ರಾಜ್ಯಸಭಾ ಎಲೆಕ್ಷನ್: ದೇವೇಗೌಡ್ರು ನಾಮಪತ್ರ ಸಲ್ಲಿಕೆ ವೇಳೆ ಅಚ್ಚರಿ ಬೆಳವಣಿಗೆ

First Published Jun 9, 2020, 5:40 PM IST

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು (ಮಂಗಳವಾರ) ರಾಜ್ಯಸಭೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಮೊದಲ ಮಹಡಿಯಲ್ಲಿ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದೇವೇಗೌಡ್ರ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಆದ್ರೆ, ಅಚ್ಚರಿ ಬೆಳವಣಿಗೆಯೊಂದು ನಡೆದಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು (ಮಂಗಳವಾರ) ರಾಜ್ಯಸಭೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
undefined
ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆ ಅಖಾಡಕ್ಕಿಳಿದಿದ್ದಾರೆ.
undefined
ಆದ್ರೆ, ದೇವೇಗೌಡ್ರ ನಾಮಪತ್ರ ಸಲ್ಲಿಕೆ ವೇಳೆ ಯಾವುದೇ ರಾಜ್ಯ ಕಾಂಗ್ರೆಸ್ ನಾಯಕರು ಹಾಜರಿಲ್ಲ. ಇದರಿಂದ ದೊಡ್ಡಗೌಡ್ರ ನಡೆ ಭಾರೀ ಕುತೂಹಲ ಮೂಡಿಸಿದೆ.
undefined
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದಲ್ಲಿ ಮಾತುಕತೆಯಾಗಿದೆ. ವಿನಃ ರಾಜ್ಯ ಮಟ್ಟದಲ್ಲಿ ಜೆಡಿಎಸ್-ಕಾಂಗ್ರೆಸ್ ಮಾತುಕತೆಯಾಗಿಲ್ಲ
undefined
ಒಟ್ಟಿನಲ್ಲಿ ದೊಡ್ಡಗೌಡ್ರು ತಮ್ಮ ಪಕ್ಷದ ಸಂಖ್ಯಾಬಲ ಕಡಿಮೆ ಇದ್ರೂ ರಾಜ್ಯ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭಾಗೆ ಸ್ಪರ್ಧೆ ಮಾಡಿದ್ದಾರೆ. ಆದ್ರೆ, ಬೆಂಬಲ ನೀಡುವ ಪಕ್ಷದ ನಾಯಕರೇ ದೇವೇಗೌಡ್ರ ನಾಮಪತ್ರ ಸಲ್ಲಿಕೆಗೆ ಒಬ್ಬರೂ ಸಾಥ್ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ.
undefined
ಇನ್ನು ದೇವೇಗೌಡ್ರು ಬರೊಬ್ಬರಿ ಎರಡು ವರ್ಷಗಳ ಬಳಿ ವಿಧಾನಸೌಧಕ್ಕೆ ಕಾಲಿಟ್ಟಿರುವುದು ವಿಶೇಷ.
undefined
2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಮಾಡಲು ಗವರ್ನರ್ ವಿರುದ್ಧ ಪ್ರತಿಭಟನೆ ಮಾಡಲು ವಿಧಾನಸೌಧಕ್ಕೆ ಆಗಮಿಸಿದ್ದರು. ಅದಾದ ಎರಡು ವರ್ಷದ ನಂತ್ರ ಇದೀಗ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ವಿಧಾನಸೌಧಕ್ಕೆ ಬಂದಿದ್ದಾರೆ.
undefined
click me!