ಬಿಜೆಪಿ ನಾಯಕರ ಜೊತೆಗೆ ಮಾತುಕತೆಗೆ ಮುಂದಾಗಿರುವ ವೇಳೆಯಲ್ಲಿಯೇ ಎಚ್ಡಿಕೆ ಭೇಟಿಯಾಗಿರುವುದು ನಾನಾ ಕುತೂಹಲ ಹುಟ್ಟುಹಾಕಿದೆ. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಂಸದ ಕರಡಿ ಸಂಗಣ್ಣ, ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಆಗಮಿಸಿದ್ದೇನೆ, ಹೊರತು ಯಾವುದೇ ರಾಜಕೀಯ ವಿಷಯದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.