Published : Apr 17, 2023, 03:58 PM ISTUpdated : Apr 18, 2023, 03:43 PM IST
ಬೆಂಗಳೂರು (ಏ.17): ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ವಿವಿಧ ಪಕ್ಷದ ನಾಯಕರು ತಮ್ಮ ತಮ್ಮ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ವಿ ಸೋಮಣ್ಣ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿ ಹಲವು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಯಾರೆಲ್ಲ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ ಎಂಬ ವಿವರ ಇಲ್ಲಿದೆ.
ಕನಕಪುರ ತಾಲ್ಲೂಕು ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ಪತ್ನಿ ಉಷಾ ಜೊತೆಗೂಡಿ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಟೆಂಪಲ್ ರನ್ ಹಾಗೂ ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ನಡೆಸಿ ನಾಮಪತ್ರ ಸಲ್ಲಿಸಿದರು.
211
ಇನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇವರಿಗೆ ಪುತ್ರ ನಿಖಿಲ್ ಕುಮಾಸ್ವಾಮಿ ಪತ್ನಿ ಅನಿತಾ ಸಾಥ್ ನೀಡಿದರು.
311
ವರುಣಾದಲ್ಲಿ ಅಪಾರ ಬೆಂಬಲಗರೊಂದಿಗೆ ವಸತಿ ಸಚಿವ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇವರಿಗೆ ಸಿಎಂ ಬೊಮ್ಮಾಯಿ ಮತ್ತು ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು. ಸೋಮಣ್ಣ ಚಾಮರಾಜನಗರದಿಂದ ಕೂಡ ಸ್ಪರ್ಧಿಸುತ್ತಿದ್ದಾರೆ.
411
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು. ಸಿ.ಟಿ. ರವಿಗೆ ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್ ಜೊತೆಯಾದರು.
511
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ಸಂಸದೆ ಸುಮಲತಾ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಶ್ರೀರಂಗಪಟ್ಟಣದಲ್ಲಿ ರ್ಯಾಲಿ ನಡೆಸಿದರು.
611
ಕಾನೂನು ತೊಡಕಿನ ಹಿನ್ನೆಲೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ವಿನಯ ಕುಲಕರ್ಣಿ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಅಭ್ಯರ್ಥಿ ಪರ ಏಜೆಂಟ್ ರಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
711
ಶಾಮನೂರು
ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ದಕ್ಷಿಣ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಹಾಗೂ ಉತ್ತರ ಕ್ಷೇತ್ರಕ್ಕೆ ಅವರ ಪುತ್ರ ಎಸ್ಎಸ್ ಮಲ್ಲಿಕಾರ್ಜುನ ಕಾಂಗ್ರೆಸ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
811
ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದಿವಂಗತ ಡಿಕೆ ರವಿ ಪತ್ನಿ ಕುಸುಮಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕುಸುಮಾ ಹನುಮಂತರಾಯಪ್ಪ ಚರಾಸ್ತಿಯ ಒಟ್ಟು ಮೌಲ್ಯ - 2 ಕೋಟಿ 80 ಲಕ್ಷ ಆಗಿದೆ. 1 ಕೋಟಿ 97 ಲಕ್ಷ ಸ್ಥಿರಾಸ್ತಿ ಹೊಂದಿರುವ ಕುಸುಮಾ 55 ಲಕ್ಷ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನ ಆಭರಣ ಹೊಂದಿದ್ದಾರೆ. 1 ಕೋಟಿ 22 ಲಕ್ಷ ಸಾಲ ಇದೆ. ಮೂರು ಕ್ರಿಮಿನಲ್ ಕೇಸ್ ಗಳು ಇವರ ವಿರುದ್ಧ ಇದೆ.
911
kageri
ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ “ಭಾರತೀಯ ಜನತಾ ಪಕ್ಷದ” ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.
1011
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಯಾಗಿ ಅರಬೈಲ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಕೆ.
1111
ಅಶೋಕ
ಕನಕಪುರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯಾಗಿ ಕಂದಾಯ ಸಚಿವ ಆರ್.ಅಶೋಕ್ ನಾಮಪತ್ರ ಸಲ್ಲಿಸಿದರು. ಸಚಿವ ಅಶ್ವಥ್ ನಾರಾಯಣ ಸಾಥ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.