ಕೊಪ್ಪಳದಲ್ಲೇ ಸಿಕ್ಕ ರಾಜ್ಯಸಭಾ ಅಚ್ಚರಿ ಅಭ್ಯರ್ಥಿಗೆ ಸಿಹಿ ತಿನ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ

First Published Jun 8, 2020, 5:33 PM IST

ಭಾರತೀಯ ಜನತಾ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸ್ತುತ ರಾಜ್ಯಸಭೆಗೆ ರಾಜ್ಯದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ಕೊಪ್ಪಳ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವವರಿಗೆ ಕಾರ್ಯಕ್ರಮವೊಂದರಲ್ಲಿ ಸಿಕ್ಕ ರಾಜ್ಯಸಭಾ ಅಭ್ಯರ್ಥಿ ಅಶೋಕ ಗಸ್ತಿ ಅವರಿಗೆ ಸಿಹಿ ತಿನ್ನಿಸಿ ಅಭಿನಂದನೆ ಹೇಳಿದರು.

ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ ಅವರಿಗೆ ರಾಜ್ಯಸಭಾ ಸದಸ್ಯ ಅಭ್ಯರ್ಥಿಯಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಭೇಟಿಯಾದರು.
undefined
ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ನಡೆಯುತ್ತಿದ್ದ ಪಕ್ಷದ ಸಭೆ ವೇಳೆ ಕಟೀಲ್ ಹಾಗೂ ಅಶೋಕ್ ಗಸ್ತಿ ಮುಖಾಮುಖಿ ಭೇಟಿಯಾದರು.
undefined
ಈ ವೇಳೆ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ಮ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರು
undefined
ಪಕ್ಷದ ಕಾರ್ಯಕ್ರಮದ ವೇದಿಕೆ ಮೇಲೆಯೇ ಕರೆದು ಅವರಿಗೆ ಅಭಿನಂದನೆ ಸಲ್ಲಿಸದರು.
undefined
ರಾಯಚೂರು ಮೂಲದ ಅಶೋಕ ಗಸ್ತಿಯವರಿಗೆ ರಾಜ್ಯಸಭಾ ಟಿಕೆಟ್ ಘೋಷಣೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಪ್ರದರ್ಶನ ಮಾಡಿದೆ. ಸವಿತ ಸಮಾಜದವರಾಗಿರುವ ಅಶೋಕ್ ಗಸ್ತಿ ಅವರು ಬಿಎ.ಎಲ್‌ಎಲ್‌ಬಿ ಮುಗಿಸಿದ್ದು, ಮೊದಲಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿದ್ದರು. ಅಷ್ಟೇ ಅಲ್ಲದೇ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರು.
undefined
ರಾಜ್ಯಸಭಾ ಸದಸ್ಯ ಅಭ್ಯರ್ಥಿಗಳಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರೆ, ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದ ಕಟೀಲ್.
undefined
click me!