ಚಿತ್ರಗಳಲ್ಲಿ: ಸಿಎಂ ಘೋಷಣೆಗೂ ಮುನ್ನ ಸಿದ್ದು ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮ!

Published : May 17, 2023, 05:17 PM ISTUpdated : May 17, 2023, 05:20 PM IST

ಫೋಟೋ ಕೃಪೆ: ವೀರಮಣಿ, ಕನ್ನಡ ಪ್ರಭ ಬೆಂಗಳೂರು (ಮೇ.17): ಕಾಂಗ್ರೆಸ್ ಪಕ್ಷವು ಕರ್ನಾಟಕಕ್ಕೆ ತನ್ನ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಘೋಷಿಸಲಿದೆ ಎಂಬ ಸುದ್ದಿಯ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯ ನಾನಾ ಭಾಗಗಳಲ್ಲಿ ಸಿದ್ದರಾಮಯ್ಯ   ಅಭಿಮಾನಿಗಳು ಇನ್ನಿಲ್ಲದಂತೆ ಸಂಭ್ರಮಿಸುತ್ತಿದ್ದಾರೆ. ತವರು ಜಿಲ್ಲೆ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಕೂಡ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯ ಭಾವಚಿತ್ರ ಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಫ್ಲೆಕ್ಸ್‌ನಲ್ಲಿ ಸಿದ್ದರಾಮಯ್ಯ ಜೊತೆಗೆ ಮೊಮ್ಮಗ ಧವನ್ ರಾಕೇಶ್ ಸಿದ್ದರಾಮಯ್ಯ ಭಾವಚಿತ್ರದಲ್ಲಿ ಕೂಡ ಮುಂದಿನ‌ ವಾರಸುದಾರ ಎಂದು ಅಭಿಮಾನಿಗಳು  ಬರೆದಿದ್ದಾರೆ.

PREV
110
ಚಿತ್ರಗಳಲ್ಲಿ: ಸಿಎಂ ಘೋಷಣೆಗೂ ಮುನ್ನ ಸಿದ್ದು ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮ!

ಸಿದ್ದರಾಮಯ್ಯ ತವರಿನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಕ್ಕೆ ಹಾಲಿನ ಅಭಿಷೇಕ ಮಾಡಲಾಗಿದೆ. ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗಲಿದೆ ಎಂಬ ಸುದ್ದಿ ಬೆನ್ನಲ್ಲೇ   ಹುಟ್ಟೂರಲ್ಲಿ ಹಾಲಿನ ಅಭಿಷೇಕ ಮಾಡಿದ ಗ್ರಾಮದ ಯುವಕರು.

210

ಸಿದ್ದರಾಮಯ್ಯ ಅವರ ಬೆಂಗಳೂರಿನ ಮನೆ ಮುಂದೆ ಅಭಿಮಾನಿಗಳು ಹೆಚ್ಚುತ್ತಿರುವ  ಹಿನ್ನೆಲೆ ಮನೆ ಮುಂದೆ ಪೊಲೀಸರ ನಿಯೋಜನೆ ಮಾಡಲಾಗಿದೆ.

310

ಸಿದ್ದರಾಮಯ್ಯ ಅವರ ಅಭಿಮಾನಿಗಳಿಂದ ಹಲವು ಕಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ. ಸಿಎಂ ಘೋಷಣೆ ಆಗದಿದ್ದರೂ ಸಂಭ್ರಮಿಸಿದ ಅಭಿಮಾನಿಗಳು.

410

ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು ಹೆಚ್ಚುತ್ತಿದ್ದಂತೆ  ದಾರಿಯುದ್ದಕ್ಕೂ ಬ್ಯಾರಿಕೇಡ್ ಗಳನ್ನು ಅಳವಡಿಕೆ ಮಾಡಲಾಗಿದೆ.

510

ಇನ್ನು ಸಿದ್ದರಾಮಯ್ಯ ಸಿಎಂ ಆಗಲೆಂದು  201 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ನೆರವೇರಿಸಿದ ಅಭಿಮಾನಿಗಳು. ಶಿವಮೊಗ್ಗದ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ. ಜಿಲ್ಲಾ ಯುವ ಕುರುಬರ ವೇದಿಕೆ ವತಿಯಿಂದ ವಿಶೇಷ ಪೂಜೆ.

610

ಬೆಂಗಳೂರಿನ ಗಾಂಧಿ ಭವನ ರಸ್ತೆಯನ್ನು ಪೊಲೀಸರು  ಪೂರ್ತಿ ಬಂದ್ ಮಾಡಿದ್ದಾರೆ. ಗಾಂಧಿ ಭವನ ರಸ್ತೆಯಲ್ಲಿ ಸಿದ್ದರಾಮಯ್ಯ ಫ್ಲೆಕ್ಸ್ ಗಳು   ರಾರಾಜಿಸುತ್ತಿದೆ.

710

ಬೆಂಗಳೂರಿನ ಗಾಂಧಿ ಭವನ  ರಸ್ತೆ  ಕಂಪ್ಲೀಟ್  ಬಂದ್ ಮಾಡಿ, ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಭಿಗಿ ಭದ್ರತೆ ಕೈಗೊಂಡ ಪೊಲೀಸರು

810

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯರಿಗೆ ಶುಭಾಶಯ ಎಂಬ ಬ್ಯಾನರ್‌ಗಳನ್ನು ಅಭಿಮಾನಿಗಳು ಅಳವಡಿಕೆ ಮಾಡಿದ್ದಾರೆ.

910

ಸಿದ್ದರಾಮಯ್ಯ ಅವರು ಸಿಎಂ ಎಂದು ಘೋಷಿಸುವ ಮುನ್ನವೇ ಬೆಂಗಳೂರು ನಗರದ ಮಲ್ಲೇಶ್ವರಂ, ಶಿವಾನಂದ ಸರ್ಕಲ್, ರೇಸ್ ಕೋರ್ಸ್ ಬಳಿ ರಾರಾಜಿಸುತ್ತಿರುವ ಬ್ಯಾನರ್ ಗಳು

1010

ಸಿದ್ದರಾಮಯ್ಯ ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ. ಸಿದ್ದರಾಮಯ್ಯು ಪೋಟೋಗೆ ಹಾಲಿನ ಅಭಿಮಾನಿಗಳು. ಸಿದ್ದರಾಮಯ್ಯ ಮನೆ ಮುಂದೆ ಹರ್ಷೋದ್ಘಾರ ವ್ಯಕ್ತ ಪಡಿಸುತ್ತಿರುವ ಅಭಿಮಾನಿಗಳು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories