ಚಿತ್ರಗಳಲ್ಲಿ: ಸಿಎಂ ಘೋಷಣೆಗೂ ಮುನ್ನ ಸಿದ್ದು ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮ!

First Published May 17, 2023, 5:17 PM IST

ಫೋಟೋ ಕೃಪೆ: ವೀರಮಣಿ, ಕನ್ನಡ ಪ್ರಭ

ಬೆಂಗಳೂರು (ಮೇ.17): ಕಾಂಗ್ರೆಸ್ ಪಕ್ಷವು ಕರ್ನಾಟಕಕ್ಕೆ ತನ್ನ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಘೋಷಿಸಲಿದೆ ಎಂಬ ಸುದ್ದಿಯ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯ ನಾನಾ ಭಾಗಗಳಲ್ಲಿ ಸಿದ್ದರಾಮಯ್ಯ   ಅಭಿಮಾನಿಗಳು ಇನ್ನಿಲ್ಲದಂತೆ ಸಂಭ್ರಮಿಸುತ್ತಿದ್ದಾರೆ. ತವರು ಜಿಲ್ಲೆ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಕೂಡ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯ ಭಾವಚಿತ್ರ ಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಫ್ಲೆಕ್ಸ್‌ನಲ್ಲಿ ಸಿದ್ದರಾಮಯ್ಯ ಜೊತೆಗೆ ಮೊಮ್ಮಗ ಧವನ್ ರಾಕೇಶ್ ಸಿದ್ದರಾಮಯ್ಯ ಭಾವಚಿತ್ರದಲ್ಲಿ ಕೂಡ ಮುಂದಿನ‌ ವಾರಸುದಾರ ಎಂದು ಅಭಿಮಾನಿಗಳು  ಬರೆದಿದ್ದಾರೆ.

ಸಿದ್ದರಾಮಯ್ಯ ತವರಿನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಕ್ಕೆ ಹಾಲಿನ ಅಭಿಷೇಕ ಮಾಡಲಾಗಿದೆ. ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸಿಗಲಿದೆ ಎಂಬ ಸುದ್ದಿ ಬೆನ್ನಲ್ಲೇ   ಹುಟ್ಟೂರಲ್ಲಿ ಹಾಲಿನ ಅಭಿಷೇಕ ಮಾಡಿದ ಗ್ರಾಮದ ಯುವಕರು.

ಸಿದ್ದರಾಮಯ್ಯ ಅವರ ಬೆಂಗಳೂರಿನ ಮನೆ ಮುಂದೆ ಅಭಿಮಾನಿಗಳು ಹೆಚ್ಚುತ್ತಿರುವ  ಹಿನ್ನೆಲೆ ಮನೆ ಮುಂದೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಸಿದ್ದರಾಮಯ್ಯ ಅವರ ಅಭಿಮಾನಿಗಳಿಂದ ಹಲವು ಕಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ. ಸಿಎಂ ಘೋಷಣೆ ಆಗದಿದ್ದರೂ ಸಂಭ್ರಮಿಸಿದ ಅಭಿಮಾನಿಗಳು.

ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು ಹೆಚ್ಚುತ್ತಿದ್ದಂತೆ  ದಾರಿಯುದ್ದಕ್ಕೂ ಬ್ಯಾರಿಕೇಡ್ ಗಳನ್ನು ಅಳವಡಿಕೆ ಮಾಡಲಾಗಿದೆ.

ಇನ್ನು ಸಿದ್ದರಾಮಯ್ಯ ಸಿಎಂ ಆಗಲೆಂದು  201 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ನೆರವೇರಿಸಿದ ಅಭಿಮಾನಿಗಳು. ಶಿವಮೊಗ್ಗದ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ. ಜಿಲ್ಲಾ ಯುವ ಕುರುಬರ ವೇದಿಕೆ ವತಿಯಿಂದ ವಿಶೇಷ ಪೂಜೆ.

ಬೆಂಗಳೂರಿನ ಗಾಂಧಿ ಭವನ ರಸ್ತೆಯನ್ನು ಪೊಲೀಸರು  ಪೂರ್ತಿ ಬಂದ್ ಮಾಡಿದ್ದಾರೆ. ಗಾಂಧಿ ಭವನ ರಸ್ತೆಯಲ್ಲಿ ಸಿದ್ದರಾಮಯ್ಯ ಫ್ಲೆಕ್ಸ್ ಗಳು   ರಾರಾಜಿಸುತ್ತಿದೆ.

ಬೆಂಗಳೂರಿನ ಗಾಂಧಿ ಭವನ  ರಸ್ತೆ  ಕಂಪ್ಲೀಟ್  ಬಂದ್ ಮಾಡಿ, ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಭಿಗಿ ಭದ್ರತೆ ಕೈಗೊಂಡ ಪೊಲೀಸರು

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯರಿಗೆ ಶುಭಾಶಯ ಎಂಬ ಬ್ಯಾನರ್‌ಗಳನ್ನು ಅಭಿಮಾನಿಗಳು ಅಳವಡಿಕೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಎಂದು ಘೋಷಿಸುವ ಮುನ್ನವೇ ಬೆಂಗಳೂರು ನಗರದ ಮಲ್ಲೇಶ್ವರಂ, ಶಿವಾನಂದ ಸರ್ಕಲ್, ರೇಸ್ ಕೋರ್ಸ್ ಬಳಿ ರಾರಾಜಿಸುತ್ತಿರುವ ಬ್ಯಾನರ್ ಗಳು

ಸಿದ್ದರಾಮಯ್ಯ ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ. ಸಿದ್ದರಾಮಯ್ಯು ಪೋಟೋಗೆ ಹಾಲಿನ ಅಭಿಮಾನಿಗಳು. ಸಿದ್ದರಾಮಯ್ಯ ಮನೆ ಮುಂದೆ ಹರ್ಷೋದ್ಘಾರ ವ್ಯಕ್ತ ಪಡಿಸುತ್ತಿರುವ ಅಭಿಮಾನಿಗಳು

click me!