ತಾಲೂಕು ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ಆರಂಭಗೊಂಡಿತು. ಡಿ.ಕೆ.ಶಿವಕುಮಾರ್ ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಮಾನ್ಯ ಮಾಡಿದರು. ಈ ಮೂಲಕ ನಾಮಪತ್ರ ತಿರಸ್ಕಾರಗೊಳ್ಳಬಹುದು, ರಾಜಕೀಯ ಭವಿಷ್ಯ ಏನಾಗಬಹುದು ಎಂಬ ಆತಂಕದಲ್ಲಿದ್ದ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.