ತುಮಕೂರು (ಮೇ.14): ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸುತ್ತಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಶಿವಕುಮಾರ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಕಾಡುಸಿದ್ದೇಶ್ವರ ಮಠಕ್ಕೆ ಭೇಟಿ ಬಳಿಕ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ . ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ನಮಸ್ಕರಿದ ಡಿ.ಕೆ ಶಿವಕುಮಾರ್.
24
ಗದ್ದುಗೆಗೆ ನಮಸ್ಕರಿಸಿದ ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಡಿಕೆಶಿಗೆ ಶಾಲು ಹೊದಿಸಿ, ಹಾರ ಹಾಕಿ ಆಶೀರ್ವಾದ ಮಾಡಿದ ಸಿದ್ದಲಿಂಗ ಸ್ವಾಮೀಜಿ.
34
ಡಿ.ಕೆ ಶಿವಕುಮಾರ್ಗೆ ಜಿಲ್ಲಾ ಕಾಂಗ್ರೆಸ್ನ ಮುಖಂಡರು ಸಾಥ್ ನೀಡಿದರು. ಇದಕ್ಕೂ ಮುನ್ನ ಕಾಡುಸಿದ್ದೇಶ್ವರ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟರು.
44
ಮಂಡ್ಯದ ಕಾಂಗ್ರೆಸ್ ಶಾಸಕ ದರ್ಶನ್ ಪುಟ್ಟಣಯ್ಯ, ತಿಪಟೂರಿನ ಷಡಾಕ್ಷರಿ, ಚೆಲುವನಾರಾಯಸ್ವಾಮಿ, ಬೇಳೂರು ಗೋಪಾಲಕೃಷ್ಣ, ಮಳವಳ್ಳಿ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಕೂಡ ಕಾಡುಸಿದ್ದೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.