ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಇದು ಸಂವಿಧಾನದ ಹಬ್ಬವಾಗಿದ್ದು, ನಾನು ನನ್ನ ಹಕ್ಕನ್ನು ಚಲಾಯಿಸಿದೆ, ನೀವೂ ಕೂಡ ತಪ್ಪದೇ ಮತದಾನ ಮಾಡಿ, ನಿಮ್ಮ ಹಕ್ಕನ್ನು ಚಲಾಯಿಸಿ. ದೇಶದ ಭದ್ರತೆಗೆ, ಧರ್ಮದ ರಕ್ಷಣೆಗೆ, ಅಭಿವೃದ್ಧಿಗಾಗಿ ಮತ ನೀಡಿ ಎಂದು ಹೇಳಿದ್ದಾರೆ.