ಅಲ್ಲಿ ರಾಹುಲ್ ಗಾಂಧಿ, ಇಲ್ಲಿ ಅಖಾಡಕ್ಕಿಳಿದ ಡಿಕೆ ಶಿವಕುಮಾರ್...!

First Published May 23, 2020, 3:16 PM IST

ವಲಸೆ ಕಾರ್ಮಿಕರ ವಿಚಾರದಲ್ಲಿ ಕಾಂಗ್ರೆಸ್, ಸರ್ಕಾರಗಳನ್ನು ಎಚ್ಚರಿಸುವ ಕೆಲಸಗಳನ್ನು ಮಾಡುತ್ತಿದೆ. ಅತ್ತ ರಾಹುಲ್ ಗಾಂಧಿ ವಲಸೆ ಕಾರ್ಮಿಕರನ್ನು ಖುದ್ದು ಭೇಟಿ ಮಾಡಿ ಕುಂದುಕೊರತೆಗಳನ್ನು ಆಲಿಸಿದ್ದು, ಇತ್ತ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿಕೆ ಶಿವಕುಮಾರ್ ಅವರು ಫುಲ್ ಆಕ್ಟಿವ್ ಆಗಿದ್ದು, ಅಖಾಡಕ್ಕಿಳಿದಿದ್ದಾರೆ. ಇದೀಗ ಕೊರೋನಾ ಲಾಕ್‌ಡೌನ್‌ನಲ್ಲೂ ಬಿಜೆಪಿ ನೇತೃತ್ವದ ಸರ್ಕಾರವನ್ನು ಡಿಕೆಶಿ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.
undefined
ತಮ್ಮ ಊರುಗಳಿಗೆ ವಾಪಸ್ಸಾಗಲು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಭೇಟಿ ಮಾಡಿದರು.
undefined
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರ ಕುಂದುಕೊರತೆಗಳನ್ನು ಆಲಿಸಿದರು.
undefined
ಇದೇ ಮೊದಲಲ್ಲ. ಈ ಹಿಂದೆ ವಲಸೆ ಕಾರ್ಮಿಕರ ಪರ ಬೀದಿಗಿಳಿದು ಅವರ ಬಸ್ ವೆಚ್ಚವನ್ನು ಭರಿಸುವುದಾಗಿ ಹೇಳಿ ಸರ್ಕಾರವನ್ನು ಎಚ್ಚರಿಸಿದ್ದರು.
undefined
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ (ಕೆಎಸ್ಆರ್ ಟಿಸಿ) ಭೇಟಿ ನೀಡಿ ಪ್ರಯಾಣಿಕರ ಪರಿಸ್ಥಿತಿ ಹಾಗೂ ಅವರಿಗೆ ಕಲ್ಪಿಸಲಾಗಿರುವ ಬಸ್ ವ್ಯವಸ್ಥೆಯನ್ನು ಅವಲೋಕಿಸಿದ್ದರು. ಇದರಿಂದ ಸರ್ಕಾರ ಎಚ್ಚರಗೊಂಡಿತ್ತು.
undefined
ಬೆಂಗಳೂರಿನಲ್ಲಿರುವ ಕೇರಳಿಗರನ್ನು ತಮ್ಮ ರಾಜ್ಯಕ್ಕೆ ವಾಪಸ್ಸಾಗಲು ಕಲ್ಪಿಸಿದ 8 ವಿಶೇಷ ಬಸ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿದ್ದರು.
undefined
ವಲಸೆ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು.
undefined
click me!