RR ನಗರ ಉಪಕದನ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್‌ ಖಂಡಿಸಿ ಕಾಂಗ್ರೆಸ್‌ ಧರಣಿ

Kannadaprabha News   | Asianet News
Published : Oct 17, 2020, 09:57 AM IST

ಬೆಂಗಳೂರು(ಅ.17): ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಸ್ಥಳೀಯ ಪೊಲೀಸರು ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಹಾಗೂ ರಾಜಕೀಯ ಪ್ರೇರಿತವಾಗಿದ್ದು, ಕೂಡಲೇ ಈ ದೂರು ಕೈಬಿಡುವಂತೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತರು ಶುಕ್ರವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆ ಮಂದೆ ಪ್ರತಿಭಟನೆ ನಡೆಸಿದ್ದಾರೆ.

PREV
14
RR ನಗರ ಉಪಕದನ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್‌ ಖಂಡಿಸಿ ಕಾಂಗ್ರೆಸ್‌ ಧರಣಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಆತ್ಮೀಯರಾಗಿರುವ ಠಾಣೆಯ ಇನ್‌ಸ್ಪೆಕ್ಟರ್‌ ನವೀನ್‌ ಅವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಆತ್ಮೀಯರಾಗಿರುವ ಠಾಣೆಯ ಇನ್‌ಸ್ಪೆಕ್ಟರ್‌ ನವೀನ್‌ ಅವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು

24

ಪ್ರತಿಭಟನಾನಿರತ ಮಹಿಳಾ ಕಾಂಗ್ರೆಸ್‌ ನಾಯಕಿಯರು ಇನ್‌ಸ್ಪೆಕ್ಟರ್‌ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಪಶ್ಚಿಮ ವಲಯ ಪೊಲೀಸ್‌ ಆಯುಕ್ತರಿಗೆ ಇದೇ ವೇಳೆ ದೂರು ಸಲ್ಲಿಸಿದ್ದಾರೆ. 

ಪ್ರತಿಭಟನಾನಿರತ ಮಹಿಳಾ ಕಾಂಗ್ರೆಸ್‌ ನಾಯಕಿಯರು ಇನ್‌ಸ್ಪೆಕ್ಟರ್‌ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಪಶ್ಚಿಮ ವಲಯ ಪೊಲೀಸ್‌ ಆಯುಕ್ತರಿಗೆ ಇದೇ ವೇಳೆ ದೂರು ಸಲ್ಲಿಸಿದ್ದಾರೆ. 

34

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿ, ಎಸಿಪಿ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗದಿರುವುದು ಸಾಭೀತಾಗಿದೆ. ಹಾಗಾಗಿ ಕೂಡಲೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿ, ಎಸಿಪಿ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗದಿರುವುದು ಸಾಭೀತಾಗಿದೆ. ಹಾಗಾಗಿ ಕೂಡಲೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

44

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌, ಮಾಜಿ ಸಚಿವೆ ಉಮಾಶ್ರೀ, ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವು ಮಹಿಳಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌, ಮಾಜಿ ಸಚಿವೆ ಉಮಾಶ್ರೀ, ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವು ಮಹಿಳಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

click me!

Recommended Stories