ಬೆಳಗಾವಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ನಿತಿನ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಆಗಮಿಸುವಂತೆ ಕೋರಲಾಗಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಕೂಡ ಪ್ರಚಾರಕ್ಕೆ ಆಗಮಿಸುವಂತೆ ಕೋರಲಾಗಿದ್ದು, ಅವರು ಕೂಡ ಕ್ಷೇತ್ರಕ್ಕೆ ಆಗಮಿಸಿ, ಬಿಜೆಪಿ ಪರವಾಗಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.