ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿಗಳಾದ ರಮೇಶ್ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್, ಮಾಜಿ ಸಚಿವರು, ಶಾಸಕರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು. ವಿವಿಧ ಯೋಜನೆಗಳ ಮಹಿಳಾ ಫಲಾನುಭವಿಗಳು ಇದೇ ಸಂದರ್ಭದಲ್ಲಿ ಪ್ರಧಾನಿಯರಿಗೆ ಕೃತಜ್ಞತೆ ಸಲ್ಲಿಸಲು ಶಾಲು ಹೊದಿಸಿ ಸನ್ಮಾನ ಮಾಡಿದರು. ಕಂಬಳಿ ಹೊದಿಸಿ ಗೌರವಾರ್ಪಣೆ ಮಾಡಲಾಯಿತು.