ಹುಬ್ಬಳ್ಳಿ (ಏ.17): ಕಾಂಗ್ರೆಸ್ ಹತಾಶೆಗೊಂಡಿದೆ. ಎಲ್ಲ ಸಮೀಕ್ಷೆಗಳಲ್ಲಿ ಹಿನ್ನಡೆಯಾಗಿದೆ. ಹೀಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಅತ್ಯಂತ ಹಿರಿಯ ಜೀವಿ. ಅವರು ಕರ್ನಾಟಕದಿಂದ ಏಕೈಕ ಪ್ರಧಾನಿಯಾಗಿದ್ದವರು. ಅವರ ಬಗ್ಗೆ ತುಚ್ಛ ಭಾಷೆ ಬಳಸುತ್ತಿರುವುದು ಖಂಡನೀಯ ಎಂದರು.