ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗಿನಂತೆ ಓಲೈಕೆ ರಾಜಕಾರಣವನ್ನು ತನ್ನದಾಗಿಸಿಕೊಂಡಿದೆ ಎಂದರು. ಕಾಂಗ್ರೆಸ್ ಪಕ್ಷವು ಮತ ಬ್ಯಾಂಕ್ ರಾಜಕೀಯವನ್ನು ತನ್ನದಾಗಿ ಮಾಡಿಕೊಂಡಿದೆ ಎಂದು ಟೀಕಿಸಿದರು. ಅಭಿವೃದ್ಧಿಯೇ ನನ್ನ ಗುರಿ ಎಂದು ವಿವರಿಸಿದರು.
ಗ್ಯಾರಂಟಿಗಳು ಫಲಪ್ರದವಾಗಿಲ್ಲ; ಕಾಂಗ್ರೆಸ್ ಪಕ್ಷವು ರಾಜ್ಯದ ಆರ್ಥಿಕ ಸ್ಥಿತಿಯನ್ನು ಅಧೋಗತಿಗೆ ಒಯ್ದಿದೆ. ಮೋದಿಜೀ ಅವರ ಸಾಧನೆಯನ್ನು ಗಮನಿಸಿ ಬಿಜೆಪಿಗೆ ಮತ ಕೊಡಿ ಎಂದು ವಿನಂತಿಸಿದರು. ಅಪರಾಧ ಮಾಡುವವರಿಗೆ ಕಾಂಗ್ರೆಸ್ ಬೆಂಬಲ ಕೊಡುತ್ತಿದೆ; ಆದರೆ, ಜೀವ ಉಳಿಸುವ ಗ್ಯಾರಂಟಿಯನ್ನು ಮೋದಿಜೀ ನೀಡುತ್ತಾರೆ ಎಂದು ವಿವರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಕಾರ್ಕಳ, ಜಿಲ್ಲಾಧ್ಯಕ್ಷ ಎನ್.ಎಸ್.ಹೆಗ್ಡೆ, ಸಂಸದರು, ಶಾಸಕರು, ಮಾಜಿ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು, ರಾಜ್ಯ- ಜಿಲ್ಲಾ ಪದಾಧಿಕಾರಿಗಳು ವೇದಿಕೆ ಮೇಲಿದ್ದರು. ಬೇಡರ ವೇಷದ ಕಿರೀಟ ತೊಡಿಸಿ, ಮಾರಿಕಾಂಬಾ ದೇವಿಯ ಪ್ರತಿಮೆ ನೀಡಿ, ಕಾಳುಮೆಣಸು, ಅಡಿಕೆ, ಏಲಕ್ಕಿಯ ಹಾರವನ್ನು ಮೋದಿಜೀ ಅವರಿಗೆ ಸಮರ್ಪಿಸಿ ಗೌರವಿಸಲಾಯಿತು.