ನಿಖಿಲ್ ಮದ್ವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದವರ ಬಾಯಿಗೆ ಸಿಎಂ ಬೀಗ

First Published Apr 18, 2020, 6:31 PM IST

ಲಾಕ್‌ಡೌನ್ ನಡುವೆಯೂ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ನೆರವೇರಿಸಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಗೆ ಆಪಕ್ಷೇಗಳು ವ್ಯಕ್ತವಾಗಿವೆ. ಅಲ್ಲದೇ ಲಾಕ್‌ಡೌನ್ ನಿಯಮ ಪಾಲಿಸಿಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ. ಇದೀಗ ಸಿಎಂ ಬಿಎಸ್‌ ಯಡಿಯೂರ ಅವರು ಆರೋಪ ಮಾಡಿದವರ ಬಾಯಿಗೆ ಬೀಗ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
undefined
ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು
undefined
ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ
undefined
ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ ಸರಳವಾಗಿ ವಿವಾಹ ನಡೆಸಿದ್ದಾರೆ.
undefined
ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.
undefined
ಈ ಮೂಲಕ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು
undefined
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್‌ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.
undefined
ಕುಮಾರಸ್ವಾಮಿ ಮಗನ‌ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.
undefined
ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕಎಲ್ಲಾ ಆರೋಪಗಳಿಗೆ ಉತ್ತರಿಸಿದರು
undefined
ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
undefined
ಕೊರೋನಾ ಲಾಕ್‌ಡೌನ್‌ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,
undefined
click me!