ಚಿತ್ರದುರ್ಗ (ಫೆ.20): ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ವೇಳೆಗೆ ಪರಿಶಿಷ್ಟರಿಗೆ ಆಹ್ವಾನ ನೀಡಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಮಾದಾರ ಚನ್ನಯ್ಯ ಶ್ರೀ, ಕಾಗಿನೆಲೆ ಶ್ರೀ ಸೇರಿ ಅನೇಕರು ಹೋಗಿ ಬಂದಿದ್ದಾರೆ. ಅಯೋಧ್ಯೆಗೆ ತೆರಳಿದ್ದಕ್ಕೆ ಶ್ರೀಗಳು ಆನಂದ ಪಟ್ಟಿದ್ದಾರೆ.