ಮತದಾರರ ಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ರಾಜ್ಯಸಭೆಯಲ್ಲಿ ಅವರು ಆರೋಪಿಸಿದರು.
ನವದೆಹಲಿ: ಮತದಾರರ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR)ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಇಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಭಾಷಣದ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಅಕ್ರಮ ವಲಸಿಗರ ರಕ್ಷಿಸಲುತೃಣಮೂಲ ಕಾಂಗ್ರೆಸ್ ಕೋರ್ಟ್ ಮೊರೆ ಹೋಗುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ಭಾಷಣದಲ್ಲಿ ಬ್ಯಾನರ್ಜಿಯವರ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದ್ದಾರೆ.
26
ನಿನ್ನೆ ಎಸ್ಐಆರ್ ವಿರುದ್ಧ ಕೋರ್ಟ್ನಲ್ಲಿ ವಾದ ಮಂಡಿಸಿದ್ದ ಮಮತಾ
ನಿನ್ನೆ, ಮಮತಾ ಬ್ಯಾನರ್ಜಿ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಪೀಠದ ಮುಂದೆ ಎಸ್ಐಆರ್ ವಿರುದ್ಧ ವಾದ ಮಂಡಿಸಿ, ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರವು ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದರು.
36
ಅಧಿಕಾರದಲ್ಲಿರುವುದೇ ಮಮತಾ ಬ್ಯಾನರ್ಜಿಗೆ ಮುಖ್ಯ
ಹೀಗಾಗಿ ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಕ್ರೂರವಾದ ಸರ್ಕಾರ ಎಂದು ಕರೆದರು. ಅದು ಅಧಿಕಾರಕ್ಕಾಗಿ ಮಾತ್ರ ಕಾಳಜಿ ವಹಿಸುತ್ತದೆ, ಜನರಿಗಾಗಿ ಅಲ್ಲ. ಕ್ರೂರ ಸರ್ಕಾರವು ಪತನದ ಎಲ್ಲಾ ಹೊಸ ದಾಖಲೆಗಳನ್ನು ಮಾಡುತ್ತಿದೆ. ಆದರೆ ಅವರು ಇಲ್ಲಿ ನಮಗೆ ಪಾಠ ಹೇಳುತ್ತಿದ್ದಾರೆ. ಅಲ್ಲಿನ ಜನರ ಭವಿಷ್ಯ ಕತ್ತಲೆಯಲ್ಲಿ ಮುಳುಗುತ್ತಿದೆ, ಆದರೆ ಅವರು (ರಾಜ್ಯ) ಅದರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಅಧಿಕಾರದಲ್ಲಿರುವುದು ಬಿಟ್ಟರೆ ಅವರಿಗೆ ಯಾವುದೇ ಆಕಾಂಕ್ಷೆಗಳಿಲ್ಲ ಎಂದು ಪ್ರಧಾನಿ ಹೇಳಿದರು.
ನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನ
ಅಕ್ರಮ ವಲಸಿಗರನ್ನು ರಕ್ಷಿಸುತ್ತಿರುವುದಕ್ಕೆ ಬ್ಯಾನರ್ಜಿಯವರ ಪಕ್ಷವನ್ನು ಟೀಕಿಸಿದ ಅವರು, ಅಂತಹ ನಾಯಕರನ್ನು ದೇಶದಲ್ಲಿ ಹೇಗೆ ಸ್ವೀಕರಿಸಲಾಗುತ್ತದೆ ಎಂದು ಆಶ್ಚರ್ಯಪಟ್ಟರು. ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೂ, ನಮ್ಮ ದೇಶದಲ್ಲಿ, ಕೆಲವು ಗುಂಪುಗಳು ನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ಆಕ್ರಮಣಕಾರಿಯಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ? ಎಂದು ಪ್ರಧಾನಿ ಪ್ರಶ್ನಿಸಿದರು.
56
ದೇಶದ ಯುವಕರಿಗೆ ಇರುವ ಅವಕಾಶಗಳನ್ನು ಈ ಅಕ್ರಮ ವಲಸಿಗರು ಕಸಿಯುತ್ತಿದ್ದಾರೆ
ದೇಶದ ಯುವಕರಿಗೆ ಇರುವ ಅವಕಾಶಗಳನ್ನು ಈ ಅಕ್ರಮ ವಲಸಿಗರು ಕಸಿಯುತ್ತಿರುವ ಬಗ್ಗೆಯೂ ಪ್ರಧಾನಿ ಕಳವಳ ವ್ಯಕ್ತಪಡಿಸಿದರು. ಒಳ ನುಸುಳುಕೋರರು ನಮ್ಮ ಯುವಕರ ಉದ್ಯೋಗ ಮತ್ತು ಜೀವನೋಪಾಯವನ್ನು ಕಸಿದುಕೊಳ್ಳುತ್ತಿದ್ದಾರೆ, ಬುಡಕಟ್ಟು ಸಮುದಾಯಗಳ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ ಮತ್ತು ನಮ್ಮ ಪುತ್ರರು ಮತ್ತು ಪುತ್ರಿಯರ ಸುರಕ್ಷತೆ ಮತ್ತು ಭವಿಷ್ಯಕ್ಕೆ ಬೆದರಿಕೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.
66
ಪಶ್ಚಿಮ ಬಂಗಾಳದಲ್ಲಿ ಈ ವರ್ಷ ವಿಧಾನಸಭೆ ಚುನಾವಣೆ
ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಈ ಬಾರಿ ನಡೆಯಲಿದ್ದು, ಬಿಜೆಪಿ ಅಲ್ಲಿನ ಟಿಎಂಸಿ ಸರ್ಕಾರದ ವಿರುದ್ಧ ಈ ಅಕ್ರಮ ಒಳನುಸುಳುವಿಕೆ ಹಾಗೂ ಅಕ್ರಮ ವಲಸಿಗರನ್ನು ರಕ್ಷಿಸುತ್ತಿರುವ ವಿಚಾರವನ್ನೇ ಚುನಾವಣಾ ಅಸ್ತ್ರವಾಗಿ ಮಾಡಿದೆ. ಮಮತಾ ಬ್ಯಾನರ್ಜಿ ಪಕ್ಷವು ತೀವ್ರವಾಗಿ ವಿರೋಧಿಸುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಬಿಜೆಪಿ ಬೆಂಬಲಿಸುತ್ತಿದೆ. ಆದರೆ ಈ ಆತುರದ ಪ್ರಕ್ರಿಯೆಯು ಕಾನೂನುಬದ್ಧ ನಾಗರಿಕರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಟಿಎಂಸಿ ಆರೋಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.