ದೇಶದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ದೇಶಾದ್ಯಂತ ಚುನಾಯಿತ ಸಂಸದರು ಮತ್ತು ಶಾಸಕರು ಸೋಮವಾರ ಮತ ಚಲಾವಣೆ ಮಾಡಿದ್ದಾರೆ. ರಾಜ್ಯದ ಇಬ್ಬರು ಸಂಸದರು ಇಂದು ವಿಧಾನಸೌಧದಲ್ಲಿ ಮತದಾನ ಮಾಡಲು ಪರ್ಮಿಶನ್ ಪಡೆದಿದ್ದಾರೆ. ಅನಾರೋಗ್ಯದ ಕಾರಣ ದೇವೆಗೌಡ, ಶ್ರೀನಿವಾಸ್ ಪ್ರಸಾದ್ ದೆಹಲಿಗೆ ತೆರಳಿಲ್ಲ. ಇಬ್ಬರು ಬೆಂಗಳೂರಿನಲ್ಲೇ ಮತದಾನ ಮಾಡಿದ್ದಾರೆ. ಕಳೆದ ಸಲ ಬಿಜೆಪಿ 17 ಮತಗಳು ಅಸಿಂಧುಗೊಂಡಿದ್ದ ಹಿನ್ನೆಲೆ ಈ ಬಾರಿ ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರ ವಹಿಸಲಾಗಿದೆ. ಕೇಸರಿ ಶಾಲು ಹಾಕಿಕೊಂಡು ಬಿಎಂಟಿಸಿ ಬಸ್ ನಲ್ಲಿ ಬಿಎಸ್ ವೈ ,ಸಿಎಂ ಬೊಮ್ಮಾಯಿ ಮತ್ತು ಕೆಲ ಸಚಿವರ ತಂಡ ಮತದಾನ ಮಾಡಲು ತೆರಳಿದ್ದರು.
ದೇಶದ 15ನೇ ರಾಷ್ಟ್ರಪತಿಯನ್ನು ಆಯ್ಕೆಗೆ ಮತದಾನ, ರಾಜ್ಯದ ಬಿಜೆಪಿ ನಾಯಕರಿಂದ ಹಕ್ಕು ಚಲಾವಣೆ. ಮತ ಅಸಿಂಧುವಾಗದಂತೆ ಎಚ್ಚರಿಕೆ
29
ದೇಶಕ್ಕೆ ನೂತನ ರಾಷ್ಟ್ರಪತಿ ಆಯ್ಕೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿರುವ ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು
39
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ರಾಷ್ಟ್ರಪತಿ ಆಯ್ಕೆ ಹಿನ್ನೆಲೆ ಮತ ಚಲಾವಣೆ ಮಾಡುತ್ತಿರುವುದು.
49
ಕೇಸರಿ ಶಾಲು ಮತ್ತು ಟೋಪಿ ಧರಿಸಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ (prabhu chauhan) ಅವರು ಮತ ಚಲಾವಣೆ ಮಾಡಿರುವುದು.
59
ಕೇಸರಿ ಶಾಲು ಧರಿಸಿ ಕಾರ್ಕಳದ ಶಾಸಕ, ಇಂಧನ ಮತ್ತು ಕನ್ನಡ -ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರಿಂದ ಮತದಾನ
69
ಸೊರಬ ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ (Kumar Bangarappa) ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ಮತದಾನ.
79
ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿರುವುದು .
89
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಆನಂದ್ ಸಿಂಗ್ ಅವರು ಕೇಸರಿ ಶಾಲು ಧರಿಸಿ ತಮ್ಮ ಮತದಾನ ಹಕ್ಕು ಚಲಾಯಿಸಿದರು.
99
presidential election 2022
ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ಮತದಾನ ಚಲಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.