ಮೌನವೇ ಉತ್ತರ!: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸ್ಥಳೀಯವಾಗಿಯೇ ಶೆಟ್ಟರ್ ಇದ್ದರೂ ಸಹ ಭಾನುವಾರ ಹುಬ್ಬಳ್ಳಿಯಲ್ಲಿ ನಡೆದ ವಿಕಸಿತ ಭಾರತ ಅಭಿಯಾನ ಹಾಗೂ ವಿಮಾನ ನಿಲ್ದಾಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ದೂರ ಉಳಿದರು. ಬಿಜೆಪಿ ಕಾರ್ಯಕ್ರಮಗಳಿಗೆ ಆಹ್ವಾನ ನೀಡದ ವಿಚಾರಕ್ಕೆ ಮೌನದಿಂದಲೇ ಉತ್ತರಿಸಿದ ಜಗದೀಶ ಶೆಟ್ಟರ್, ಆಹ್ವಾನದ ವಿಚಾರವಾಗಿ ನಾನು ಏನನ್ನೂ ಮಾತನಾಡುವುದಿಲ್ಲ, ಮೌನವೇ ಅದಕ್ಕೆ ಉತ್ತರ ಎಂದರು.