ಸವಣೂರು (ಫೆ.27): ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಭಯದಿಂದ ಕಾಂಗ್ರೆಸ್ ರೆಸಾರ್ಟ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸವಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರ ಸಂಖ್ಯೆ 66 ಹಾಗೂ ಜೆಡಿಎಸ್ ಸಂಖ್ಯೆ 19 ಇದೆ. ನಮ್ಮಲ್ಲಿ 40 ಶಾಸಕರ ಸಂಖ್ಯೆ ಹೆಚ್ಚಿರುವುದರಿಂದ ಜೆಡಿಎಸ್ನ ಕುಪೇಂದ್ರ ರೆಡ್ಡಿಯವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ನಾಲ್ವರು ಪಕ್ಷೇತರರು ಇರುವುದರಿಂದ ಅವರ ಪ್ರಯತ್ನ ಅವರು ಮಾಡುತ್ತಿದ್ದಾರೆ.