ಶನಿವಾರ ಬೆಳಗ್ಗೆ 11ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಪುಟದ ಸಚಿವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.