ಈ ಹಿಂದೆ ಕಾಂಗ್ರೆಸ್ ಮುನಿರತ್ನ ಅವರಿಗೆ ಎರಡು ಬಾರಿ ಚುನಾವಣೆಗೆ ನಿಲ್ಲಲು ಟಿಕೆಟ್ ನೀಡಿದ್ದರಿಂದ ಅವರನ್ನು ಕ್ಷೇತ್ರದ ಮತದಾರರು ಆಶೀರ್ವದಿಸಿ ಗೆಲ್ಲಿಸಿದ್ದರು. ಆದರೆ ಅವರು ಹಣ, ಅಧಿಕಾರಕ್ಕಾಗಿ ಪಕ್ಷಕ್ಕೆ ದ್ರೋಹ ಬಗೆದು, ಮತದಾರರ ಬೆನ್ನಿಗೂ ಚೂರಿ ಹಾಕಿ ಬಿಜೆಪಿಗೆ ಹೋಗಿದ್ದಾರೆ. ಇಂತಹವರನ್ನು ಮತದಾರರು ಸೋಲಿಸಿ ತಕ್ಕಪಾಠ ಕಲಿಸಬೇಕು. ಕ್ಷೇತ್ರಕ್ಕೆ ಯಾರು ಶಾಸಕರಾಗಬೇಕು?, ಶುದ್ಧ ಹಸ್ತದ ಸುಸಂಸ್ಕೃತ, ವಿದ್ಯಾವಂತ ಹಾಗೂ ನೊಂದ ಹೆಣ್ಣು ಮಗಳು ಕುಸುಮಾ ಆಯ್ಕೆಯಾಗಬೇಕೋ ಅಥವಾ ಬೇರೆಯವರೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು. ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾಗೆ ಮತದಾರರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ ಸಿದ್ದರಾಮಯ್ಯ
ಈ ಹಿಂದೆ ಕಾಂಗ್ರೆಸ್ ಮುನಿರತ್ನ ಅವರಿಗೆ ಎರಡು ಬಾರಿ ಚುನಾವಣೆಗೆ ನಿಲ್ಲಲು ಟಿಕೆಟ್ ನೀಡಿದ್ದರಿಂದ ಅವರನ್ನು ಕ್ಷೇತ್ರದ ಮತದಾರರು ಆಶೀರ್ವದಿಸಿ ಗೆಲ್ಲಿಸಿದ್ದರು. ಆದರೆ ಅವರು ಹಣ, ಅಧಿಕಾರಕ್ಕಾಗಿ ಪಕ್ಷಕ್ಕೆ ದ್ರೋಹ ಬಗೆದು, ಮತದಾರರ ಬೆನ್ನಿಗೂ ಚೂರಿ ಹಾಕಿ ಬಿಜೆಪಿಗೆ ಹೋಗಿದ್ದಾರೆ. ಇಂತಹವರನ್ನು ಮತದಾರರು ಸೋಲಿಸಿ ತಕ್ಕಪಾಠ ಕಲಿಸಬೇಕು. ಕ್ಷೇತ್ರಕ್ಕೆ ಯಾರು ಶಾಸಕರಾಗಬೇಕು?, ಶುದ್ಧ ಹಸ್ತದ ಸುಸಂಸ್ಕೃತ, ವಿದ್ಯಾವಂತ ಹಾಗೂ ನೊಂದ ಹೆಣ್ಣು ಮಗಳು ಕುಸುಮಾ ಆಯ್ಕೆಯಾಗಬೇಕೋ ಅಥವಾ ಬೇರೆಯವರೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು. ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾಗೆ ಮತದಾರರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ ಸಿದ್ದರಾಮಯ್ಯ