ಡಿಕೆ ಶಿವಕುಮಾರ್ಗೆ ಮಂಗಳಮುಖಿಯರಿಂದ ಸಿಕ್ತು ಗ್ರ್ಯಾಂಡ್ ವೆಲ್ಕಮ್
First Published Aug 4, 2020, 4:24 PM ISTಕರ್ನಾಟಕ ಪ್ರದೇಶ್ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಭೀತಿಯ ನಡುವೆಯೂ ಪಕ್ಷ ಸಂಘಟನೆಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಮೊನ್ನೇ ಅಷ್ಟೇ ಮಂಗಳೂರಿಗೆ ತೆರಳಿ ಹಿರಿಯ ಕಾಂಗ್ರೆಸ್ ನಾಯಕರ ಆಶೀರ್ವಾದ ಪಡೆದುಕೊಂಡಿದ್ದರು. ಇದೀಗ ಕಲಬುರಗಿಯತ್ತ ಪ್ರಯಾಣ ಬೆಳೆಸಿದ್ದು, ವಿಮಾನ ನಿಲ್ದಾಣದಲ್ಲಿ ಡಿಕೆಶಿಗೆ ವಿಶೇಷ ವೆಲ್ಕಮ್ ಸಿಕ್ಕಿದೆ.