ಟಿಆರ್ಎಸ್ ಈಗ ಅಧಿಕೃತವಾಗಿ ಬಿಆರ್ಎಸ್, ರಾಜ್ಯ ಚುನಾವಣೆಯಲ್ಲಿ ಜೆಡಿಎಸ್ಗೆ ಬೆಂಬಲ!
First Published Dec 9, 2022, 4:00 PM ISTಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ಈಗ ಅಧಿಕೃತವಾಗಿ ಭಾರತ್ ರಾಷ್ಟ್ರ ಸಮಿತಿಯಾಗಿ ಬದಲಾಗುವ ಮೂಲಕ ರಾಷ್ಟ್ರೀಯ ಪಕ್ಷ ಎನಿಸಿಕೊಂಡಿದೆ. ಶುಕ್ರವಾರದ ಪಕ್ಷದ ಅಧಿಕೃತ ಧ್ವಜ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ಪಕ್ಷದ ಕೇಂದ್ರ ಕಚೇರಿಯಾದ ತೆಲಂಗಾಣ ಭವನದಲ್ಲಿ ನಡೆಯಿತು. ಈ ವೇಳೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಹಾಜರಿದ್ದರು. ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಆರ್ಎಸ್, ಎಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ಗೆ ಬೆಂಬಲ ನೀಡಲಿದೆ ಎಂದೂ ಈ ವೇಳೆ ಘೋಷಣೆ ಮಾಡಲಾಯಿತು.