ಬೆಳಗಾವಿಯ ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ನಿವಾಸ “ಸ್ಫೂರ್ತಿ” ಗೆ ಭಾನುವಾರ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಭೇಟಿ ನೀಡಿದರು.
undefined
ದಿ.ಸುರೇಶ್ ಅಂಗಡಿಯವರ ಪುಷ್ಪಾಲಂಕೃತ ಭಾವಚಿತ್ರಕ್ಕೆ ಗೃಹ ಸಚಿವ ಅಮಿತ್ ಶಾ ನಮನಗಳನ್ನು ಅರ್ಪಿಸಿದರು.
undefined
ದಿ.ಸುರೇಶ್ ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
undefined
ಅಮಿತ್ ಶಾಗೆ ಸಿಎಂ ಬಿಎಸ್ ಯಡಿಯೂರಪ್ಪ, ಸಚಿ ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರುದಿ.ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
undefined
ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅವರು ಕೋವಿಡ್ ನಿಂದ ಬಳಲುತ್ತಿರುವಾಗ ತಾವೂ ಸಹ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದನ್ನು ನೆನಪಿಸಿಕೊಂಡು, ಅವರ ನಿಧನ ದೊಡ್ಡ ನಷ್ಟ ಉಂಟುಮಾಡಿದೆ ಎಂದು ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದರು.
undefined
ದಿ.ಸುರೇಶ ಅಂಗಡಿಯವರ ಧರ್ಮಪತ್ನಿ ಮಂಗಳಾ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ.ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ.ಅಂಗಡಿಯವರಿಗೆ ಸಾಂತ್ವನ ಹೇಳಿದರು.
undefined