ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವಲ್ನ ಜೈಲಿಗೆ ಹಾಕಿಸಿದ್ದಾರೆ
ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ನಮ್ಮಂತ ಬಡವರ ಮಕ್ಕಳನ್ನ ಸಹಿಸಿಕೊಳ್ಳುತ್ತಾರಾ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ. ಮಗನನ್ನು ಬೆಳೆಸಲು ಅಣ್ಣನ ಪುತ್ರನನ್ನು ಜೈಲಿಗೆ ಹಾಕಿಸಿದ್ದಾರೆ ಅಂತ ಹೇಳಿದ್ದಾರೆ ಎಂದ್ರು.
26
ನಿಖಿಲ್ ಕುಮಾರಸ್ವಾಮಿ
ತಮ್ಮ ಮಗ ನಿಖಿಲ್ ಚುನಾವಣೆಯಲ್ಲಿ ಗೆದ್ದಿಲ್ಲಾ ಅಂತ ಅಣ್ಣನ ಮಗನನ್ನೆ ಜೈಲಿಗೆ ಹಾಕಿಸಿದ್ರು. ಕ್ರಿಯೇಟ್ ಮಾಡಿ ಪ್ರಜ್ವಲ್ನ ಜೈಲಿಗೆ ಕಳಿಸಿದ್ರು. ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವಲ್ನ ಜೈಲಿಗೆ ಹಾಕಿಸಿದ್ದಾರೆ ಎಂಬ ಸ್ಪೋಟಕ ಹೇಳಿಕೆ ನೀಡಿದರು.
36
ಕದಲೂರು ಉದಯ್ ವಾಗ್ದಾಳಿ
ನಗರಸಭೆ ವಿರೋಧಿಸಿ ಗೆಜ್ಜಲಗೆರೆಯಲ್ಲಿ ಪ್ರತಿಭಟನೆಗೆ ಹೆಚ್.ಡಿ.ಕುಮಾರಸ್ವಾಮಿ ಸಾಥ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಕದಲೂರು ಉದಯ್, ಅಭಿವೃದ್ಧಿ ಆಗ್ತಿರುವ ವಿಚಾರಕ್ಕೆ ಹೋರಾಟ ಮಾಡೋದಾ? ಹೋರಾಟ ಅಂತ ಇಷ್ಟ ಬಂದಾಗೆ ಮಾಡಬಹುದಾ ಎಂದು ಪ್ರಶ್ನೆ ಮಾಡಿದರು.
50 ಸಾವಿರ ಜನರನ್ನು ಕರೆದುಕೊಂಡು ಬೆಂಗಳೂರಿಗೆ ಪಾದಯಾತ್ರೆ ಮಾಡ್ತಾರಂತೆ. ಬೆಂಗಳೂರು ಇಲ್ಲಿಗೆ ಬಹಳ ಹತ್ತಿರ ಇದೆ. ಇವರು ದೆಹಲಿಗೆ ಪಾದಯಾತ್ರೆ ಹೋಗಲಿ ವ್ಯಾಯಮವಾದ್ರು ಆಗುತ್ತೆ. ಅವರ ಆರೋಗ್ಯ ಇನ್ನು ಸ್ವಲ್ಪ ವೃದ್ಧಿ ಆಗತ್ತೆ. ಇವರು ಇಲ್ಲಿ ಬಂದು ಉಪದೇಶ ಮಾಡೋ ಅವಶ್ಯಕತೆ ಇಲ್ಲ. ಬಡವರ ಮಕ್ಕಳು, ರೈತರ ಮಕ್ಕಳು ಬೆಳೆಯ ಬಾರದು ಅಂತ ಇಲ್ಲಿ ಬಂದು ರಾಜಕೀಯ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.
56
ಹುಟ್ಟಿರುವ ಮೊಮ್ಮಗನಿಗೂ ಒಂದು ಜಾಗ
ಕುಮಾರಸ್ವಾಮಿ ಅವರಿಗೆ ಅವರ ಕುಟುಂಬ ಮಾತ್ರ ಬೆಳೆಯಬೇಕು. ಈಗ ಹುಟ್ಟಿರುವ ಮೊಮ್ಮಗನಿಗೂ ಒಂದು ಜಾಗ ಮಾಡಿಕೊಡಲು ಪ್ರಯತ್ನ ಮಾಡ್ತಿದ್ದಾರೆ. ಕುಟುಂಬದ ಎಲ್ಲರಿಗೂ ಜಾಗ ಮಾಡಿದ್ದು ಆಯ್ತು. ಈಗ ಒಂದು ಪಿಳ್ಳೆ ಹುಟ್ಟಿದೆ ಅದಕ್ಕೆ ಜಾಗ ಮಾಡ್ತಿದ್ದಾರೆ. ಬೇರೆ ಯಾರು ಇವರ ಮುಂದೆ ಬೆಳಿಬಾರದು ಅಂತ ರಾಜಕೀಯ ಮಾಡ್ತಾರೆ. ಇವರ ಜೊತೆ ಇದ್ದ ಬಚ್ಚೆಗೌಡ್ರು, ನಾಗೇಗೌಡರು, ಸಿದ್ದರಾಜುರನ್ನ ಬೆಳೆಯಲು ಬಿಡ್ಲಿಲ್ಲ.
2004ರಲ್ಲಿ ಡಬ್ಬಲ್ ಬಿ ಫಾಂ ಕೊಟ್ಟು ಸಿದ್ದರಾಜುನ ಮನೆಲಿ ಕೂರಿಸಿದ್ರು ಇದು ಮದ್ದೂರು ಜನರಿಗೆ ಗೊತ್ತಿದೆ. 2008ರಲ್ಲಿ ಇವರು ಹೇಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡ್ರು ಅಂತ ಗೊತ್ತಿದೆ. ಅವರ ಬೀಗರನ್ನ, ಕುಟುಂಬದವರ ಬೆಳಸಿಕೊಳ್ಳಲು ಏನ್ ಬೇಕಾದರೂ ಮಾಡ್ತಾರೆ. ಒಕ್ಕಲಿಗರಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿಬಿಡ್ತಾರೆ ಅಂತ ಅವರ ಕಾಲನ್ನು ಇವರು ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.