ಹುಬ್ಬಳ್ಳಿ (ಏ.08): ತಮ್ಮ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ತುಷ್ಟಿಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗ್ಗೆ 6 ಗಂಟೆಗೂ ಮುನ್ನ ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸಾ ಹಾಕುವುದು ತಪ್ಪೇ?. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದರು.