ಕಾಂಗ್ರೆಸ್, ಟಿಎಂಸಿ, ಆರ್ಜೆಡಿ, ಎಸ್ಪಿ, ಶಿವಸೇನೆ (ಯುಬಿಟಿ) ಒಳಗೊಂಡ ಕೂಟದ ನಾಯಕರು ದೆಹಲಿಯಲ್ಲಿ ಈ ಕುರಿತು ಸಭೆ ನಡೆಸಿ ಪತ್ರ ಬರೆಯುವ ತೀರ್ಮಾನ ಕೈಗೊಂಡಿದ್ದರು. ಈ ಬಗ್ಗೆ ಕೂಟದ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ. ಡಿಎಂಕೆ ಸಭೆಯಲ್ಲಿ ಭಾಗವಹಿಸದಿದ್ದರೂ ಪತ್ರಕ್ಕೆ ಸಹಿ ಹಾಕಿದೆ. ಸಭೆಯಲ್ಲಿ ಭಾಗಿಯಾಗದ ಆಪ್ ಅಧಿವೇಶನ ಬಗ್ಗೆ ಪ್ರಧಾನಿಗೆ ಪ್ರತ್ಯೇಕ ಪತ್ರ ಬರೆದಿದೆ.