ಸೋಲಿನ ಭೀತಿಯಿಂದ ಐಟಿ, ಇಡಿ, ಸಿಬಿಐ ಮುಂತಾದ ಸಂಸ್ಥೆಯನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ರೇಡ್ ಮಾಡಲಾಗುತ್ತಿದೆ. ಐಟಿ ರೇಡ್ ಮಾಡಿದ ಬಳಿಕ ಚುನಾವಣಾ ಬಾಂಡ್ ಗೆ ಕೋಟಿಗಟ್ಟಲೆ ದೇಣಿಗೆ ಪಡೆಯಲಾಗುತ್ತಿದೆ. ಮಾಧ್ಯಮವನ್ನೂ ನಿಯಂತ್ರಿಸುತ್ತಿರುವುದರಿಂದ ಸತ್ಯ ಹೇಳಲು ಭಯಪಡುತ್ತಿದ್ದಾರೆ ಎಂದರು.