Karnataka Politics: ಬಿಎಸ್‌ವೈ ಕಣ್ಣೀರು ಹಾಕಿದ್ದೇಕೆ? ಡಿಕೆಶಿ ಮತ್ತೆ ಪ್ರಶ್ನೆ

Kannadaprabha News   | Asianet News
Published : Dec 06, 2021, 12:46 PM ISTUpdated : Dec 06, 2021, 02:01 PM IST

ರಾಮದುರ್ಗ(ಡಿ.06):  ನಮ್ಮ ಪಕ್ಷದ ವಿಚಾರ ಬಿಡಿ. ಇವರು ಯಾಕೆ ಕಣ್ಣೀರು ಹಾಕಿದ್ರು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಅವರು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yediyurappa) ಅವರಿಗೆ ಮತ್ತೆ ಪ್ರಶ್ನೆಯೆಸೆದಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಉಸಿರಾಡಲು ಬಿಡುವುದಿಲ್ಲ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಅವರು ಈ ರೀತಿಯಾಗಿ ತಿರುಗೇಟು ನೀಡಿದ್ದಾರೆ.

PREV
14
Karnataka Politics: ಬಿಎಸ್‌ವೈ ಕಣ್ಣೀರು ಹಾಕಿದ್ದೇಕೆ? ಡಿಕೆಶಿ ಮತ್ತೆ ಪ್ರಶ್ನೆ

ಬೆಳಗಾವಿ(Belagavi) ಜಿಲ್ಲೆಯ ರಾಮದುರ್ಗ(Ramdurg) ತಾಲೂಕಿನ ಕಲ್ಲೂರದಲ್ಲಿ ಕಾಂಗ್ರೆಸ್‌(Congress) ಸ್ವಾಭಿಮಾನಿ ಸಮಾವೇಶವನ್ನು ಉದ್ಘಾಟಿಸಿದ ಡಿ.ಕೆ.ಶಿವಕುಮಾರ್‌

24

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಗಳ ಬಗ್ಗೆ ಮಂತ್ರಿಗಳೇ ಮಾತಾಡ್ತಾರೆ ಎಂದು ಟೀಕಿಸಿದರು. ಈ ಚುನಾವಣೆಯಲ್ಲಿ ನಾವು ಎಲ್ಲ ವರ್ಗದವರಿಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಅವರು ಯಾಕೆ ಮಾಡಿಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

34

ದೇಶದಲ್ಲಿ ಊದ್ಯೋಗ ಖಾತರಿ ಯೋಜನೆ ಜಾರಿಗೆ ತಂದು ಜನರು ಮಾಡುವ ಕೂಲಿಗೆ ಹಣ ಕೊಟ್ಟಿದ್ದು ಕಾಂಗ್ರೆಸ್‌ ಪಕ್ಷ. ಗ್ರಾಮ ಪಂಚಾಯಿತಿಗಳಿಗೆ 2 ಕೋಟಿಗೆ ಅನುದಾನವನ್ನು ಹೆಚ್ಚಿಸಿದ್ದು ಕಾಂಗ್ರೆಸ್‌ ಪಕ್ಷ. ಯಡಿಯೂರಪ್ಪ ಆಗಲಿ, ಮೋದಿ(Narendra Modi) ಆಗಲಿ ಇಬ್ಬರೂ ಪಂಚಾಯಿತಿ ಅಭಿವೃದ್ಧಿಗಳಿಗೆ ಯೋಜನೆಗಳನ್ನು ಜಾರಿಗೆ ತಂದಿದ್ದಾರಾ ಎಂದು ಬಿಜೆಪಿಯನ್ನು(BJP) ತರಾಟೆಗೆ ತೆಗೆದುಕೊಂಡ ಡಿ.ಕೆ.ಶಿವಕುಮಾರ್‌

44

ಇನ್ನು ಡಿಸೆಂಬರ್‌ 14ರಂದು ಶಾಸಕ ರಮೇಶ್‌ ಜಾರಕಿಹೊಳಿ(Ramesh Jarkiholi) ಸುದ್ದಿಗೋಷ್ಠಿ ಮಾಡುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಕೊಡ್ತಿದ್ದಾರೆ, ಎಲ್ಲವನ್ನೂ ಬಿಚ್ತಾ ಇದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಮಾರ್ಮಿಕವಾಗಿ ಹೇಳಿದ ಡಿಕೆಶಿ 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories