ಜಮೀರ್ ಅಹ್ಮದ್‌ ಖಾನ್‌ಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿದ ತೇಜಸ್ವಿ ಸೂರ್ಯ: ಕಾರಣ..?

First Published Jan 9, 2021, 11:03 PM IST

ರಾಜಕಾರಣದಲ್ಲಿ ಯಾರೂ ವೈರಿಗಳು ಅಲ್ಲ..ಮಿತ್ರರೂ ಅಲ್ಲ ಸಿಕ್ಕಾಪಟ್ಟೆ ಹಳೆ ಗಾದೆನೇ ಇದೆ. ಅದೇ ರೀತಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಬಹುದು. ಇದೀಗ ರಾಜಕೀಯ ಬದ್ಧ ವೈರಿಗಳು ಮುಖಾಮುಖಿ ಭೇಟಿಯಾಗಿ ಪರಸ್ಪರ ಸಂತೋಷದಲ್ಲಿ ತೊಡಗಿದ್ದಾರೆ. ಅಲ್ಲದೇ ಈ ವೇಳೆ ಜಮೀರ್ ಅಹಮದ್ ಖಾನ್  ಅವರಿಗೆ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕೇಸರಿ ಶಾಲು ಹಾಕಿ ಸನ್ಮಾನಿಸಿರುವುದು ವಿಶೇಷ

ಕಾಂಗ್ರೆಸ್ ನಾಯಕ ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹಮದ್ ಖಾನ್ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಚೇರಿಗೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
undefined
ಜಮೀರ್ ಅಹಮ್ಮದ್ ಖಾನ್ ಅವರು ತೇಜಸ್ವಿ ಸೂರ್ಯ ಅವರನ್ನ ಭೇಟಿ ಮಾಡಿ ಮಗಳ ಮದುವೆಗೆ ಆಹ್ವಾನ ನೀಡಿದರು.
undefined
ಈ ವೇಳೆ ತೇಜಸ್ವಿ ಸೂರ್ಯ ಅವರು ಜಮೀರ್ ಅಹಮ್ಮದ್ ಖಾನ್ ಅವರಿಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿರುವುದು ವಿಶೇಷವಾಗಿದೆ.
undefined
ಜಮೀರ್ ಅಹಮ್ಮದ್ ಖಾನ್ ಹೆಗಲಿನ ಮೇಲೆ ಕೇಸರಿ ಶಾಲು ಕಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ರೀತಿಯಾಗಿ ಚರ್ಚೆಗಳು ಆಗುತ್ತಿವೆ.
undefined
ಸ್ವತಃ ಜಮೀರ್ ಅಹಮ್ಮದ್ ಅವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿವೆ.
undefined
click me!