ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತಕ್ಷಣ ಧಾವಿಸಿ ಚಿರತೆಯ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಎಚ್ಚರಿಕೆಯಿಂದ ತಂತಿಬೇಲಿಯನ್ನು ಕತ್ತರಿಸಿ ಚಿರತೆಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದರು. ಬಳಿಕ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಯಿತು.
ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ಕಾಳಜಿಯನ್ನು ಶ್ಲಾಘಿಸಿದರು. 'ಗ್ರಾಮಸ್ಥರು ತಕ್ಷಣ ನಮಗೆ ಮಾಹಿತಿ ನೀಡಿದ ಕಾರಣ, ಚಿರತೆಯನ್ನು ಸಮಯಕ್ಕೆ ಸರಿಯಾಗಿ ರಕ್ಷಣೆ ಮಾಡಿದ್ದೇವೆ. ಇಂತಹ ಪ್ರಾಣಿಗಳ ರಕ್ಷಣೆಗೆ ನಾಗರಿಕ ಜವಾಬ್ದಾರಿ ಕೂಡ ಅಗತ್ಯ ಎಂದು ಹೇಳಿದರು.