ಆರು ಜನರ ವಿರುದ್ಧ ದೂರು ದಾಖಲು:
ಈ ಘಟನೆಯಿಂದ ಮನನೊಂದ ಯುವತಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಣೇಶ ಗೊಂಡನ ವಿರುದ್ಧ ಮಾತ್ರವಲ್ಲದೆ, ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಕೃಷ್ಣಿಗೊಂಡ, ಹರೀಶ ಗೊಂಡ, ಭಾಸ್ಕರ ಗೊಂಡ, ನಾಗೇಂದ್ರ ಗೊಂಡ, ಭಟ್ಕಳದ ನಾಗೇಶ್ ಹಾಗೂ ಎಂ.ಡಿ.ನಾಯ್ಕ ಎಂಬವರ ವಿರುದ್ಧವೂ ದೂರು ದಾಖಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.