ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲಿಯೇ, ದೇಶದ ಪ್ರಮುಖ ಸಲಿಂಗಿ ಜೋಡಿಗಳಲ್ಲಿ ಆತಂಕ ಶುರುವಾಗಿದೆ. ಭಾರತದ ಖ್ಯಾತ ಸ್ಪ್ರಿಂಟರ್ ಹಾಗೂ ಒಲಿಂಪಿಯನ್ ದ್ಯುತಿ ಚಂದ್ ಕೂಡ ಇದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಸಲಿಂಗ ವಿವಾಹದ ಕುರಿತಾಗಿ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಅದರಂತೆ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ನಿರಾಕರಿಸಿದೆ.
214
ಸುಪ್ರೀಂ ಕೋರ್ಟ್ ತಮ್ಮ ಪರವಾಗಿ ತೀರ್ಪು ನೀಡಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ದೇಶದ ಪ್ರಮುಖ ಸಲಿಂಗ ಜೋಡಿಗಳಿಗೆ ಇದರಿಂದ ದೊಡ್ಡ ಆಘಾತವಾಗಿದೆ.
314
ಇದರಲ್ಲಿ ಭಾರತದ ಪ್ರಖ್ಯಾತ ಅಥ್ಲೀಟ್ ಹಾಗೂ ಒಲಿಂಪಿಯನ್ ದ್ಯುತಿ ಚಂದ್ ಕೂಡ ಹೊರತಾಗಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ನನ್ನೆಲ್ಲಾ ಪ್ಲ್ಯಾನ್ಗಳನ್ನು ಉಲ್ಟಾ ಮಾಡಿದೆ ಎಂದು ಅವರು ಹೇಳಿದ್ದಾರೆ.
414
ನಾನು ನನ್ನ ಜೊತೆಗಾರ್ತಿ ಮೊನಾಲಿಸಾರನ್ನು ಮದುವೆಯಾಗುವ ಎಲ್ಲಾ ಪ್ಲ್ಯಾನ್ ಮಾಡಿದ್ದೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪು ಈ ಪ್ಲ್ಯಾನ್ಗಳನ್ನು ಹಾಳು ಮಾಡಿದೆ ಎಂದು ದ್ಯುತಿ ಚಂದ್ ಹೇಳಿದ್ದಾರೆ.
514
ನಾನು ಹಾಗೂ ಮೋನಾಲಿಸಾ ಕಳೆದ ಐದು ವರ್ಷಗಳಿಂದ ಜೊತೆಯಾಗಿ ಬದುಕುತ್ತಿದ್ದೇವೆ. ವಯಸ್ಕರಾರಿಗೂ ನಾವು ತುಂಬಾ ಸಂತೋಷದಿಂದ ಬದುಕುತ್ತಿದ್ದೇವೆ ಎಂದು ದ್ಯುತಿ ಹೇಳಿದ್ದಾರೆ.
614
ನಮ್ಮ ಬದುಕಿನಲ್ಲಿ ನಮ್ಮದೇ ಆದಂಥ ಸ್ವಂಥ ನಿರ್ಧಾರಗಳನ್ನು ಮಾಡಲು ನಾವೀಗ ಶಕ್ತರಾಗಿದ್ದೇವೆ. ಸಲಿಂಗ ವಿವಾಹವನ್ನು ಮಾನ್ಯ ಮಾಡಿ ಸಂಸತ್ತು ಹೊಸ ಕಾನೂನು ಜಾರಿ ಮಾಡಲಿದೆ ಎನ್ನುವ ವಿಶ್ವಾಸ ನಮಗಿದೆ ಎಂದು ದ್ಯುತಿ ತಿಳಿಸಿದ್ದಾರೆ.
714
2019ರ ಮೇ ತಿಂಗಳಲ್ಲಿ ಭಾರತದಲ್ಲಿ ಮುಕ್ತವಾಗಿ ಹೇಳಿಕೊಂಡ ದೇಶದ ಮೊದಲ ಲೆಸ್ಬಿಯನ್ ಅಥ್ಲೀಟ್ ಆಗಿ ದ್ಯುತಿ ಚಂದ್ ಗುರುತಿಸಿಕೊಂಡರು. ಇದಕ್ಕಾಗಿ ಅವರು ತಮ್ಮ ಕುಟುಂಬದಿಂದ ದೊಡ್ಡ ಮಟ್ಟದ ಟೀಕೆ ಎದುರಿಸಿದ್ದರು.
814
2021 ರಲ್ಲಿ, ದ್ಯುತಿ ಬರ್ಮಿಂಗ್ಹ್ಯಾಮ್ನಲ್ಲಿ ಕ್ವೀನ್ಸ್ ಬ್ಯಾಟನ್ನಲ್ಲಿ ಭಾಗವಹಿಸಿದ್ದಲ್ಲದೇ, ಕಾಮನ್ವೆಲ್ತ್ ದೇಶಗಳಲ್ಲಿ ಹೋಮೋಫೋಬಿಯಾ ಬಗ್ಗೆ ಬೆಳಕು ಚೆಲ್ಲುವ ಅವಕಾಶವನ್ನು ಪಡೆದರು.
914
2022 ರ ಕಾಮನ್ವೆಲ್ತ್ ಗೇಮ್ಸ್ನ ಉದ್ಘಾಟನಾ ಸಮಾರಂಭದಲ್ಲಿ LGBTQIA+ ಧ್ವಜವನ್ನು ಹಿಡಿದಿದ್ದ ದ್ಯುತಿ ಅವರು ಹೋಮೋಫೋಬಿಯಾ ವಿರುದ್ಧ ಪ್ರಬಲ ಸಂದೇಶವನ್ನು ಕಳುಹಿಸಿದ್ದರು.
1014
2015 ರಲ್ಲಿ ಸ್ಪೋರ್ಟ್ಸ್ ಆರ್ಬಿಟ್ರೇಷನ್ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಐಎಎಎಫ್ ವಿರುದ್ಧ ದ್ಯುತಿ ಚಂದ್ 'ಲಿಂಗ' ಪ್ರಕರಣವನ್ನು ಗೆದ್ದಿದ್ದರು. ಒಂದು ವರ್ಷ ಅಮಾನತುಗೊಂಡ ನಂತರ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಲಾಯಿತು.
1114
ಸಿಎಎಸ್ ಎರಡು ವರ್ಷಗಳವರೆಗೆ ಹೈಪರ್ಆಂಡ್ರೊಜೆನಿಸಂನ ಐಎಎಎಫ್ ನೀತಿಯನ್ನು ಅಮಾನತುಗೊಳಿಸಿತು. ನಂತರ ವಿಶ್ವ ಅಥ್ಲೆಟಿಕ್ಸ್ ಸಂಸ್ಥೆಯು ನೀತಿಯನ್ನು ಬದಲಾಯಿಸಿತು, ಇದು ಈಗ 400m ನಿಂದ 1500m ವ್ಯಾಪ್ತಿಯಲ್ಲಿ ಸ್ಪರ್ಧಿಸುವ ಮಹಿಳಾ ಅಥ್ಲೀಟ್ಗಳಿಗೆ ಮಾತ್ರ ಅನ್ವಯಿಸುತ್ತದೆ, 100m ಮತ್ತು 200m ನಲ್ಲಿ ಸ್ಪರ್ಧಿಸುವ ದ್ಯುತಿಯನ್ನು ತನ್ನ ವ್ಯಾಪ್ತಿಯಿಂದ ಹೊರಗಿಟ್ಟಿತು.
1214
ದ್ಯುತಿ ಈಗ ಕೆಲವು ವರ್ಷಗಳಿಂದ ಮೊನಾಲಿಸಾ ಅವರೊಂದಿಗೆ ಬದುಕುತ್ತಿದ್ದಾರೆ. ಈ ಜೋಡಿಯು ಒಡಿಯಾ ನಿಯತಕಾಲಿಕೆ ಕದಂಬಿನಿ ಮುಖಪುಟದಲ್ಲಿ ಕಾಣಿಸಿಕೊಂಡಿದೆ.
1314
ಮೊನಾಲಿಸಾ ತನ್ನ ಗ್ರಾಮದಲ್ಲಿ ಖುದುರ್ಕುನಿ ಪೂಜೆಯ ಸಮಯದಲ್ಲಿ ದ್ಯುತಿ ಚಂದ್ರನ್ನು ಮೊದಲು ಭೇಟಿಯಾಗಿದ್ದರು ಮತ್ತು ಬಿಎ ಪದವಿಯನ್ನು ಪೂರ್ಣಗೊಳಿಸಿದ ನಂತರ ದಂಪತಿಗಳು ಒಟ್ಟಿಗೆ ವಾಸ ಮಾಡಲು ಆರಂಭಿಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.