ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರಿ ಸ್ಕಂದಪ್ರಸಾದ್ ವಿವಾಹ ಮಹೋತ್ಸವ ಸರಳವಾಗಿ ನಡೆದಿದೆ. ಇದೀಗ ಆರತಕ್ಷತೆಯೂ ಅಚ್ಚುಕಟ್ಟಾಗಿ ನೆರವೇರಿದೆ. ಸಿಎಂ ಸಿದ್ದರಾಮಯ್ಯ, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ಗಣ್ಯರು ತೇಜಸ್ವಿ ಸೂರ್ಯ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದಾರೆ. ನವ ದಂಪತಿಗಳಿಗೆ ಗಣ್ಯರು, ಸೆಲೆಬ್ರೆಟಿಗಳು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವು ಶುಭಕೋರಿದ್ದಾರೆ.