‘ಭಗವಂತ್ ಕೇಸರಿ’, ‘ಉಗ್ರಂ’, ‘ಟಕ್ ಜಗದೀಶ್’ ಮುಂತಾದ ತೆಲುಗು ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಪೆದ್ದಿ, ಈ ಸಿನಿಮಾವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಿಸುತ್ತಿದ್ದಾರೆ. ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’, ‘ಹಿಡಿಂಬ’ ಸಿನಿಮಾಗಳನ್ನು ನಿರ್ದೇಶಿಸಿರುವ ಅನಿಲ್ ಕನ್ನೆಗಂಟಿ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.