ಆ್ಯಕ್ಷನ್ ಪ್ರಿನ್ಸ್ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳ್ತಾರೆ ಮಫ್ತಿ ನರ್ತನ್‌: ಸ್ಯಾಂಡಲ್‌ವುಡ್‌ನ ಹೊಸ ಟಾಕ್‌ ಏನು?

Published : May 26, 2025, 12:17 PM IST

ಶಿವರಾಜ್‌ಕುಮಾರ್‌ ನಟನೆಯಲ್ಲಿ ‘ಭೈರತಿ ರಣಗಲ್‌’ ಚಿತ್ರವನ್ನು ನಿರ್ದೇಶಿಸಿದ್ದ ನರ್ತನ್‌, ಸದ್ಯಕ್ಕೆ ಯಾವ ಚಿತ್ರವನ್ನು ಒಪ್ಪಿಕೊಂಡಿಲ್ಲ. ಈ ನಡುವೆ ತೆಲುಗಿನ ರಾಮ್‌ ಚರಣ್‌ ತೇಜ ಅವರೊಂದಿಗೆ ಸಿನಿಮಾ ಮಾಡುತ್ತಾರೆಂಬ ಸುದ್ದಿಯೂ ಇತ್ತು. 

PREV
15

ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಮಫ್ತಿ ನರ್ತನ್‌ ಕಾಂಬಿನೇಶನ್‌ನಲ್ಲಿ ಹೊಸ ಸೆಟ್ಟೇರಲಿದೆ ಎಂಬುದು ಸದ್ಯದ ಸ್ಯಾಂಡಲ್‌ವುಡ್ ಟಾಕ್‌. ಇವರಿಬ್ಬರ ಚಿತ್ರಕ್ಕೆ ಕೆವಿಎನ್‌ ಪ್ರೊಡಕ್ಷನ್‌ ನಿರ್ಮಾಣದ ಸಾರಥ್ಯ ವಹಿಸಿಕೊಳ್ಳಲಿದೆ ಎನ್ನುವ ಸುದ್ದಿಯೂ ಇದೆ.

25

ಶಿವರಾಜ್‌ಕುಮಾರ್‌ ನಟನೆಯಲ್ಲಿ ‘ಭೈರತಿ ರಣಗಲ್‌’ ಚಿತ್ರವನ್ನು ನಿರ್ದೇಶಿಸಿದ್ದ ನರ್ತನ್‌, ಸದ್ಯಕ್ಕೆ ಯಾವ ಚಿತ್ರವನ್ನು ಒಪ್ಪಿಕೊಂಡಿಲ್ಲ. ಈ ನಡುವೆ ತೆಲುಗಿನ ರಾಮ್‌ ಚರಣ್‌ ತೇಜ ಅವರೊಂದಿಗೆ ಸಿನಿಮಾ ಮಾಡುತ್ತಾರೆಂಬ ಸುದ್ದಿಯೂ ಇತ್ತು.

35

ಇದರ ಜತೆಗೆ ಯುವರಾಜ್‌ಕುಮಾರ್‌ ಅವರ ಚಿತ್ರಕ್ಕೂ ಆ್ಯಕ್ಷನ್‌ ಕಟ್‌ ಹೇಳಿದ್ದಾರೆಂಬ ಸುದ್ದಿಯೂ ಹಬ್ಬಿತ್ತು. ಈಗ ಧ್ರುವ ಸರ್ಜಾ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆಂಬ ಸುದ್ದಿ ಕೇಳಿ ಬರುತ್ತಿದೆ.

45

ಈ ಬಗ್ಗೆ ಪತ್ರಿಕ್ರಿಯಿಸಿರುವ ನರ್ತನ್‌, ನಾನು ಈಗ ಕತೆ ಬರೆಯುತ್ತಿದ್ದೇನೆ. ಧ್ರುವ ಸರ್ಜಾ ಅವರು ಚಿತ್ರೀಕರಣಕ್ಕೆ ವಿದೇಶಕ್ಕೆ ಹೋಗಿದ್ದಾರೆ. ಅವರು ಬಂದ ಮೇಲೆ ಅವರಿಗೆ ಕತೆ ಹೇಳಬೇಕಿದೆ.

55

ಆ ನಂತರ ಉಳಿದ ಸಂಗತಿಗಳು ಅಂತಿಮಗೊಳ್ಳಲಿವೆ. ಈಗ ಎಲ್ಲವೂ ಪ್ರಾರಂಭಿಕ ಹಂತದಲ್ಲಿದೆ. ಧ್ರುವ ಸರ್ಜಾ ಅವರಿಗೆ ಕತೆ ಹೇಳಿದ ಮೇಲೆ ಉಳಿದ ವಿವರಗಳ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories