ಪತ್ನಿ ಜೊತೆ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ!

First Published May 11, 2024, 6:11 PM IST

ತಿಮ್ಮಪ್ಪನ ದರ್ಶನ ಮಾಡಿದ ನಿಖಿಲ್- ರೇವತಿ. ಸಾಮಾಜಿಕ ಜಾಲತಾಣದಲ್ಲಿ ಫುಲ್ ಪಾಸಿಟಿವ್ ಕಾಮೆಂಟ್ಸ್‌....

ಕನ್ನಡ ಚಿತ್ರರಂಗ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಇಂದು ಜಯನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.

ನಿಖಿಲ್ ಕುಮಾರಸ್ವಾಮಿ, ರೇವತಿ ಮತ್ತು ಅವ್ಯಾನ್ ದೇವ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗುಡಿಯಲ್ಲಿ ಕ್ಲಿಕ್ ಮಾಡಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ. 

Latest Videos


ತಮ್ಮ ನೆಚ್ಚಿನ ನಟ ಹಾಗೂ ರಾಜಕಾರಣಿಯನ್ನು ಕಂಡು ಜನರು ಖುಷಿಯಾಗಿದ್ದಾರೆ. ಫೋಟೋ ಕ್ಲಿಕ್ ಮಾಡಿಕೊಂಡು ಸಂಭ್ರಮಿಸಿದ್ದಾರೆ.ಫ್ಯಾನ್ ಪೇಜ್‌ಗಳಲ್ಲಿ ಅಪ್ಲೋಡ್‌ ಮಾಡಿದ್ದಾರೆ. 

ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಖತ್ ವೈರಲ್ ಆಗುತ್ತಿದ್ದು ಸಾಕಷ್ಟು ಪಾಸಿಟಿವ್ ಕಾಮೆಂಟ್‌ಗಳು ಬಂದಿರುವುದು ನೋಡಿ ನಿಕ್ಕಿ ಅಭಿಮಾನಿಗಳು ಖುಷಿಯಾಗಿದ್ದಾರೆ.

2020ರಲ್ಲಿ ರೈಡರ್ ಸಿನಿಮಾ ರಿಲೀಸ್ ನಂತರ ಯದುವೀರ್ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಸಖತ್ ಡಿಫರೆಂಟ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ವೀಕ್ಷಕರಿಗೆ ನಿರೀಕ್ಷೆ ಹೆಚ್ಚಾಗಿದೆ.

2020 ಏಪ್ರಿಲ್ 17ರಂದು ನಿಖಿಲ್ ಕುಮಾರ್ ಮತ್ತು ರೇವತಿ ರಾಮನಗರದ ತೋಟದ ಮನೆಯಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡರು. ಮಗನಿಗೆ ಅವ್ಯಾನ್ ದೇವ್‌ ಎಂದು ಹೆಸರಿಟ್ಟಿದ್ದಾರೆ. 

click me!