ಕಿರುತೆರೆ, ಬೆಳ್ಳಿ ತೆರೆ ಹಾಗೂ ಪ್ರತಿಯೊಬ್ಬ ತಂತ್ರಜ್ಞರ ಮೇಲೆ ಒಳ್ಳೆಯ ರೀತಿಯಲ್ಲಿ ಪರಿಣಾಮ ಬೀರಿದ ವ್ಯಕ್ತಿತ್ವ ಅಂದ್ರೆ ಪುನೀತ್ ರಾಜ್ಕುಮಾರ್. ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎನ್ನುವ ನೋವು ಪ್ರತಿಯೊಬ್ಬರಿಗೂ ಕಾಡುತ್ತಿದೆ.
25
ಸೋಷಿಯಲ್ ಮೀಡಿಯಾದಲ್ಲಿ ಇನ್ನೂ ಜನರು ತಮ್ಮ ನೋವನ್ನು ಹಂಚಿಕೊಳ್ಳುತ್ತಿದ್ದಾರೆ. ಆಶಿತಾ ಮದುವೆಗೆ ಪುನೀತ್ ಆಗಮಿಸಿದ ಫೋಟೋವನ್ನು ಅಪ್ಲೋಡ್ ಮಾಡಿಕೊಂಡು ಬರೆದಿದ್ದಾರೆ.
35
'ಕರ್ನಾಟಕ ರತ್ನ ನಮ್ಮನ್ನು ನೋಡುತ್ತಿದ್ದಾರೆ. ಮಿಸ್ ಯು ಅಪ್ಪು ಸರ್. ಜೀವನ ತುಂಬಾನೇ ಫ್ರಜೈಲ್ ಆಗಿದೆ. ಎಲ್ಲರೂ ಇದನ್ನು ಉದಾಹರಣೆಯಾಗಿ ಸ್ವೀಕರಿಸಲಿದ್ದಾರೆ ಎಂದು ಭಾವಿಸುವೆ'
45
'ಲೈಫ್ ತುಂಬಾನೇ ಶಾರ್ಟ್, ಮುಂದೆ ಹೇಗೆ ಎನ್ನುವ ಕಲ್ಪನೆ ಕೂಡ ಮಾಡಲು ಸಾಧ್ಯವಾಗದು. ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಸಹಾಯ ಮಾಡಿ, ಸ್ವಾರ್ಥಕ್ಕೆ ಬದುಕಬೇಡಿ,' ಎಂದು ಬರೆದುಕೊಂಡಿದ್ದಾರೆ.
55
ಆಶಿತಾ ಅವರ ಮದುವೆ ಸಮಯದಲ್ಲಿ ಕೊರೋನಾ ಅಲೆ ಎದ್ದಿತ್ತು. ಈ ಸಮಯದಲ್ಲಿ ಸಿನಿ ಆಪ್ತರು ಮದುವೆಯಲ್ಲಿ ಭಾಗಿಯಾಗುವುದಕ್ಕೆ ಚಿಂತಿಸುತ್ತಿದ್ದರು. ಆದರೆ ಪುನೀತ್ ರಾಜ್ಕುಮಾರ್ ದಂಪತಿ ಮೊದಲು ಆಗಮಿಸಿ ನವ ಜೋಡಿಗೆ ಆಶೀರ್ವಾದ ಮಾಡಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.