ನಟ ಧ್ರುವ ಸರ್ಜಾ ಅರ್ಪಿಸಿರುವ ಈ ಸಿನಿಮಾಗೆ ಆಯುಷ್ ಮಲ್ಲಿ ಆಕ್ಷನ್ ಕಟ್ ಹೇಳಿದ್ದಾರೆ. ಜಗದೀಶ್ ಕೊಪ್ಪಳ, ಆರಾವ ಲೋಹಿತ್ ನಾಗರಾಜ್, ಆದಿತ್ಯ ಸಿಂಧನೂರು, ಅದೃಷ್ಟ ಸಂಕನೂರು, ದುರುಗಪ್ಪ ಕಾಂಬ್ಳಿ, ಋತ್ವಿಕ್ ಬಳ್ಳಾರಿ, ರೇಣುಕಾ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಅವರು ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಬಿ ಸುರೇಶ್ ಬಾಬು ಕ್ಯಾಮರಾ ಕೈಚಳಕ ಈ ಸಿನಿಮಾಕ್ಕಿದೆ. ವಿಶ್ವ ಎನ್ ಎಂ ಸಂಕಲನ ಈ ಸಿನಿಮಾಕ್ಕಿದೆ. ಹಾಸ್ಯದ ಜೊತೆಗೆ ಗಂಭೀರ ವಿಷಯ ಕೂಡ ಈ ಸಿನಿಮಾದಲ್ಲಿದೆ.