Published : Apr 07, 2025, 02:38 PM ISTUpdated : Apr 07, 2025, 02:48 PM IST
ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ಕಾಂತಾರ 2 ಚಿತ್ರೀಕರಣದಲ್ಲಿ ರಿಷಬ್ ಶೆಟ್ಟಿ ಹಲವು ವಿಘ್ನಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ ದೈವದಿಂದಲೇ ರಿಷಬ್ ಶೆಟ್ಟಿಗೆ ಎಚ್ಚರಿಕೆ ಬಂದಿದೆ.
ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾಗಿ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದ ಕಾಂತಾರ ಸಿನಿಮಾ ನಟ-ನಿರ್ದೇಶಕ ರಿಷಬ್ ಶೆಟ್ಟಿಗೂ ಒಳ್ಳೆ ಹೆಸರು ತಂದುಕೊಟ್ಟಿತ್ತು. ಪಂಜುರ್ಲಿ ದೈವ, ದೈವ ನರ್ತಕರ ಕಥೆಯನ್ನು ಕನ್ನಡ ನಾಡಿನ ಜನತೆಯ ಮುಂದೆ ಇದು ಪ್ರಸ್ತುತಪಡಿಸಿತ್ತು.
210
ಆದರೆ, ಕಾಂತಾರ ಸಿನಿಮಾ ಬಂದ ಬಳಿಕ ಪಂಜುರ್ಲಿ ದೈವದ ವೇಷಭೂಷಣ ತೊಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವುದು, ತಮಾಷೆ ಮಾಡುವುದು ಕೂಡ ಹೆಚ್ಚಾಗಿತ್ತು. ಇದರಿಂದಾಗಿ ಕೊನೆಗೆ ತುಳುನಾಡಿನ ಜನತೆ ಕಾಂತಾರ ಸಿನಿಮಾವೊಂದು ಬರದೆ ಹೋಗಿದ್ದರೆ ಇಂಥ ಅಪಪ್ರಚಾರಗಳು ತಪ್ಪುತ್ತಿದ್ದವು ಎಂದು ಮಾತನಾಡಿಕೊಂಡರು.
310
ಕಾಂತಾರದ ಬಳಿಕ ಕಾಂತಾರ ಚಾಪ್ಟರ್-1 ಎನ್ನುವ ಸಿನಿಮಾವನ್ನು ರಿಷಬ್ ಶೆಟ್ಟಿ ಮಾಡುತ್ತಿದ್ದಾರೆ. ಆದರೆ, ಈ ಸಿನಿಮಾ ಸೆಟ್ಟೇರಿದ ಕ್ಷಣದಿಂದಲೂ ನಟ-ನಿರ್ದೇಶಕ ರಿಷಬ್ ಸಾಲು ಸಾಲು ತೊಂದರೆಗಳನ್ನು ಎದುರಿಸುವಂತಾಗಿದೆ.
410
ಹೌದು, ಕಾಂತಾರ ಚಾಪ್ಟರ್-1 ಸಿನಿಮಾಗೆ ಒಂದರ ಮೇಲೊಂದು ವಿಘ್ನ ಎದುರಾಗಿದೆ. ಕಾಂತಾರ ಬಂದಾಗಿದೆ. ಅದರ ಭಾಗವಾಗಿ ಮತ್ತೆ ಅದೇ ರೀತಿಯ ಯಾವುದೇ ಸಿನಿಮಾ ಮಾಡಬಾರದು ಎಂದು ದೈವಾರಾಧಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
510
Kantara Movie
ಕಾಂತಾರ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತುಳುನಾಡಿನಲ್ಲೇ ಆಗ್ರಹ ಮಾಡಲಾಗಿತ್ತು. ಇದರಿಂದ ಸಿನಿಮಾ ಹೇಗೋ ಪಾರಾಗಿ ಯಶಸ್ಸು ಕಂಡಿತ್ತು.
610
ಕಾಂತಾರ ಚಾಪ್ಟರ್-1 ಸಿನಿಮಾದಲ್ಲಿ ಸರಿಯಾಗಿ ವೇತನ ನೀಡಿಲ್ಲ ಎಂದು ಸಹ ಕಲಾವಿದರು ಪ್ರತಿಭಟನೆ ಮಾಡಿದ್ದು ಕೂಡ ಸುದ್ದಿಯಾಗಿತ್ತು.
710
ಇದಾದ ಬಳಿಕ, ಹಾಸನ ಬಳಿಕ ಡೀಮ್ಡ್ ಅರಣ್ಯದಲ್ಲಿ ಶೂಟಿಂಗ್ ಮಾಡಿದ ವಿವಾದ ಕೂಡ ಚಿತ್ರತಂಡಕ್ಕೆ ತಟ್ಟಿತ್ತು. ಸ್ಪೋಟಕ ವಸ್ತುಗಳ ಬಳಕೆ ಆರೋಪದ ಮೇಲೆ ಅರಣ್ಯ ಇಲಾಖೆ ದಾಳಿ ಮಾಡಿತ್ತು. ವನ್ಯ ಜೀವಿಗಳಿಗೆ ತೊಂದರೆ ಆಗುತ್ತೆ ಎಂದು ಎಚ್ಚರಿಕೆ ನೀಡಲಾಗಿತ್ತು.
810
2024ರಲ್ಲಿ ಸಹ ಕಲಾವಿದರಿದ್ದ ಮಿನಿ ಬಸ್ ಅಪಘಾತಕ್ಕೆ ಈಡಾಗಿತ್ತು. ಉಡುಪಿಯ ಜಡ್ಕಲ್ ಬಳಿ ಕಲಾವಿದರಿಂದ ಬಸ್ ಪಲ್ಟಿಯಾಗಿ ಕೆಲವರಿಗೆ ಪೆಟ್ಟಾಗಿತ್ತು.
910
ಈಗ ಸ್ವತಃ ರಿಷಬ್ ಶೆಟ್ಟಿಗೆ ದೈವದಿಂದಲೇ ಎಚ್ಚರಿಕೆ ಬಂದಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಮದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಈ ವೇಳೆ ಪಂಜುರ್ಲಿ ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ಗಳಿದ್ದಾರೆ. ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದೆ. ಅದರೊಂದಿಗೆ ರಿಷಬ್ ಶೆಟ್ಟಿಗೆ ಶತ್ರುಕಾಟ ಇರುವ ಬಗ್ಗೆಯೂ ಎಚ್ಚರಿಕೆಯನ್ನು ನೀಡಿದೆ.
ಈ ತೊಂದರೆಗಳ ಹೊರತಾಗಿಯೂ, ಕಾಂತಾರ: ಚಾಪ್ಟರ್-1ರ ಸಿನಿಮಾ ಶೂಟಿಂಗ್ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ವರದಿಯಾಗಿದೆ, ಅಕ್ಟೋಬರ್ 2, 2025 ರಂದು ಬಿಡುಗಡೆಯಾಗುವ ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ಚಿತ್ರವು ಅತ್ಯಂತ ಯಶಸ್ವಿ ಕಾಂತಾರ ಚಿತ್ರದ ಪೂರ್ವಭಾವಿಯಾಗಿದ್ದು, ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಬೇರುಗಳನ್ನು ಆಳವಾಗಿ ಚಿತ್ರಿಸಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.