ಬೆಂಗಳೂರು (ನ. 14): ಮಕ್ಕಳ ದಿನಾಚರಣೆ ಪ್ರಯುಕ್ತ ನಗರ ಪೊಲೀಸ್ ವತಿಯಿಂದ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಇನ್ ಫ್ಯಾಂಟ್ರಿ ರಸ್ತೆಯ ಕಮಿಷನರ್ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ನಟ ಯಶ್, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೆಚ್ಚುವರಿ ಆಯುಕ್ತ ಉಮೇಶ್ ಭಾಗಿಯಾದರು. ಕಾರ್ಯಕ್ರಮದಲ್ಲಿ ವಿವಿಧ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಭಾಗಿಯಾದರು. ಗ್ರಾಮೀಣ ಸೊಗಡಿನ ಆಟಿಕೆಗಳ ಪ್ರದರ್ಶನ, ಡೊಳ್ಳು ಕುಣಿತ ಸೇರಿ ಕಲಾತಂಡಗಳು ಭಾಗಿಯಾಗಿವೆ. ಮಕ್ಕಳ ದಿನಾಚರಣೆ ಸಂಭ್ರಮ ಇಲ್ಲಿದೆ ನೋಡಿ.