ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸರ್ಕಾರ 5 ಕೋಟಿ ರೂಪಾಯಿ ಘೋಷಣೆ ಮಾಡಿದೆ. ಈ ಸಮಯದಲ್ಲಿ ನೆಟ್ಟಿಗರು ವಿಷ್ಣು ಸ್ಮಾರಕದ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಸ್ವತಃ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.
ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.
210
ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು.
ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು.
310
ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
410
ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.
ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.
510
ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
610
'ನಮ್ಮ ಪ್ರೀತಿಯ ವಿಷ್ಣುವರ್ಧನ್ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'
'ನಮ್ಮ ಪ್ರೀತಿಯ ವಿಷ್ಣುವರ್ಧನ್ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'
710
'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'.
'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'.
810
'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.
'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.
910
ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ 5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.
ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ 5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.
1010
ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.