ಪೊಲೀಸ್ ಠಾಣೆ ಮುಂದೆ ಬಡ ಚಾಲಕನ ಕಣ್ಣೀರು
ಈ ಅಪಘಾತದಿಂದಾಗಿ ಜಖಂ ಆಗಿರುವ ಕಾರಿನ ಮಾಲೀಕರಲ್ಲೊಬ್ಬರಾದ ಕಾರ್ ಮಾಲೀಕ ಕಂ ಚಾಲಕ ಶ್ರೀನಿವಾಸ್ ಎಂಬುವರಿಗೆ ಇದರಿಂದ ಭಾರೀ ನಷ್ಟ ಉಂಟಾಗಿದೆ. ಪೊಲೀಸ್ ಸ್ಟೇಷನ್ ಮುಂದೆಯೇ ಕಣ್ಣೀರಿಟ್ಟ ಶ್ರೀನಿವಾಸ್, 'ನನ್ನ ಹೆಂಡತಿಯ ಒಡವೆ ಅಡವಿಟ್ಟು ಒಂದು ವಾರದ ಹಿಂದಷ್ಟೇ ಈ ಹೊಸ ಕಾರು ಖರೀದಿಸಿದ್ದೆ. ಕಂಪನಿಯೊಂದಕ್ಕೆ ಬಾಡಿಗೆಗೆ ಓಡಿಸುತ್ತಾ ಜೀವನ ಸಾಗಿಸುತ್ತಿದ್ದೆ. ಫೆಬ್ರವರಿ 5ಕ್ಕೆ ಮೊದಲ ಇಎಂಐ (EMI) ಕಟ್ಟಬೇಕಿದೆ. ಈಗ ಕಾರು ಜಖಂಗೊಂಡು ನಿಂತು ಹೋದರೆ ನಾನು ಸಾಲ ತೀರಿಸುವುದು ಹೇಗೆ?' ಎಂದು ಅಳಲು ತೋಡಿಕೊಂಡಿದ್ದಾರೆ.
'ನಾನು ಸಿನಿಮಾ ನಟ' ಎಂದು ಸೊಕ್ಕು ಪ್ರದರ್ಶನ?
ಅಪಘಾತದ ಬಳಿಕ ಕಾರಿನಿಂದ ಇಳಿದ ನಟ ಮಯೂರ್ ಪಟೇಲ್, 'ನಾನು ಸಿನಿಮಾ ನಟ ಮಯೂರ್ ಪಟೇಲ್, ಬೆಳಿಗ್ಗೆ ಎಲ್ಲ ಸರಿ ಮಾಡಿಕೊಡ್ತೀನಿ' ಎಂದು ಹೇಳಿದ್ದಾರಂತೆ. ಆದರೆ ಆ ಚಾಲಕ, 'ಇಲ್ಲ, ಅದೇನ್ ಸೆಟ್ಲ್ಮೆಂಟ್ ಮಾಡ್ತೀರೋ ಈಗಲೇ ಮಾಡ್ಲಿ; ಅಂತ ಪಟ್ಟು ಹಿಡಿದಿದ್ದಾರೆ. ಅದೇ ವೇಳೆಗೆ ಪೊಲೀಸರು ಸ್ಥಳಕ್ಕೆ ಬಂದು ನಟನನ್ನು ಕರೆದೊಯ್ದಿದ್ದಾರೆ. 'ಸಿಗ್ನಲ್ನಲ್ಲಿ ನಾವು ಸುಮ್ಮನೆ ನಿಂತಿದ್ದೆವು, ಕುಡಿದ ಅಮಲಿನಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದ್ದಾರೆ' ಎಂದು ಶ್ರೀನಿವಾಸ್ ದೂರಿನಲ್ಲಿ ದಾಖಲಿಸಿದ್ದಾರೆ ಎನ್ನಲಾಗಿದೆ.