ನನಗಿಂತ ಜಾಸ್ತಿ ಸಿನಿಮಾ ಪ್ರೀತಿಯುಳ್ಳ ನಿರ್ದೇಶಕ, ನಿರ್ಮಾಪಕ ವೇದ್ಗುರು ಅವರಿಗೆ ಈ ಸಿನಿಮಾದಿಂದ ಒಳ್ಳೆಯದಾಗಲಿ. ಇದೊಂದು ಒಳ್ಳೆಯ ಪ್ರಯತ್ನ, ಈ ಚಿತ್ರಕ್ಕೆ ಎಲ್ಲರ ಪ್ರೀತಿ- ಬೆಂಬಲ ಅಗತ್ಯವಿದೆ ಹೀಗೆ ಹೇಳಿದ್ದು ಅಜಯ್ ರಾವ್.
‘ನನ್ನ ವೃತ್ತಿ ಬದುಕಿನಲ್ಲಿ ರಾಧೇಯ ಸಿನಿಮಾ ಬಹಳ ವಿಶೇಷವಾದದ್ದು. ಇಂಥದ್ದೊಂದು ಪಾತ್ರ ಮಾಡಬೇಕು, ನನ್ನೊಳಗಿನ ಕಲಾವಿದನನ್ನು ಬೇರೆ ರೀತಿಯಲ್ಲಿ ಪರಿಚಯಿಸಬೇಕು. ಅದು ಈ ಸಿನಿಮಾದಲ್ಲಿ ಸಾಧ್ಯವಾಗಿದೆ’. ಹೀಗೆ ಹೇಳಿದ್ದು ಅಜಯ್ ರಾವ್.
25
ಈ ಸಿನಿಮಾದಿಂದ ಒಳ್ಳೆಯದಾಗಲಿ
ಅವರು ನಟಿಸಿರುವ ‘ರಾಧೇಯ’ ಸಿನಿಮಾ ಈಗಾಗಲೇ ಬಿಡುಗಡೆಯಾಗಿದೆ. ಈ ಕುರಿತು ಅಜೇಯ್ ರಾವ್ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನನಗಿಂತ ಜಾಸ್ತಿ ಸಿನಿಮಾ ಪ್ರೀತಿಯುಳ್ಳ ನಿರ್ದೇಶಕ, ನಿರ್ಮಾಪಕ ವೇದ್ಗುರು ಅವರಿಗೆ ಈ ಸಿನಿಮಾದಿಂದ ಒಳ್ಳೆಯದಾಗಲಿ.
35
ಎಲ್ಲರ ಪ್ರೀತಿ- ಬೆಂಬಲ ಅಗತ್ಯ
ಇದೊಂದು ಒಳ್ಳೆಯ ಪ್ರಯತ್ನ, ಈ ಚಿತ್ರಕ್ಕೆ ಎಲ್ಲರ ಪ್ರೀತಿ- ಬೆಂಬಲ ಅಗತ್ಯವಿದೆ. ನಾನೂ ಒಬ್ಬ ನಿರ್ಮಾಪಕನಾಗಿದ್ದರಿಂದ ಆತನ ಕಷ್ಟ ಏನೆಂದು ಗೊತ್ತಾಗಿದೆ. ಕ್ರಿಮಿನಲ್ ಆಗಿ ಜೈಲಿನಲ್ಲಿರುವವನ ಕ್ಯಾರೆಕ್ಟರ್ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ.
ನನ್ನ ಪಾತ್ರ ಸೈಕ್ ಥರನೇ ಇದೆ. ಇಂಥ ಪಾತ್ರ ನನಗೆ ಹೊಸದು. ಅಜಯ್ ಹೀಗೂ ಮಾಡುತ್ತಾನಾ ಎಂಬಂಥ ಪಾತ್ರವಿದು ಎಂದರು. ಅಜೇಯ್ ರಾವ್ ಹಾಗೂ ಸೋನಲ್ ಮೊಂತೆರೋ ನಾಯಕ -ನಾಯಕಿಯಾಗಿ ನಟಿಸಿರುವ ಈ ಸಿನಿಮಾ ವಿಶಿಷ್ಟ ಕಥಾಹಂದರವನ್ನು ಹೊಂದಿದೆ.
55
ಭಾವನಾತ್ಮಕ ಆ್ಯಕ್ಷನ್ ಥ್ರಿಲ್ಲರ್
ನಾಯಕನ ತ್ಯಾಗ ಮನೋಭಾವದಿಂದ ರಾಧೇಯ ಎಂಬ ಕರ್ಣನ ಹೆಸರನ್ನು ಇಡಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಇದೊಂದು ಪ್ರೇಮಕತೆಯುಳ್ಳ ಭಾವನಾತ್ಮಕ ಆ್ಯಕ್ಷನ್ ಥ್ರಿಲ್ಲರ್ ಆಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.